ರೈತರ ಮೇಲಿನ ವನ್ಯಪ್ರಾಣಿಗಳ ದಾಳಿಗೆ ಜೀವ ರಕ್ಷಣೆ ನೀಡಲು ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಜಿಲ್ಲೆಯ ಖಾನಾಪೂರ ತಾಲೂಕಿನ ಅರಣ್ಯ ಪ್ರದೇಶದಲ್ಲಿನ ರೈತರಿಗೆ ವನ್ಯಪ್ರಾಣಿಗಳಿಂದ ಜೀವ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಗೂ ಪ್ರಾಣಿಗಳಿಂದ ದಾಳಿಗೆ ಒಳಗಾದ ರೈತರಿಗೆ ಪರಿಹಾರ ನೀಡುವದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ನಗರದಲ್ಲಿ ನೂರಾರು ರೈತರು ಸೋಮವಾರ ದಿನದಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಬೋಗಾರವೇಸ್ನಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತರು, ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವನ್ಯಪ್ರಾಣಿಗಳಿಂದ ಸ್ವಯಂ ರಕ್ಷಣೆಗಾಗಿ ಅವುಗಳ ಮೇಲೆ ಗುಂಡು ಹಾರಿಸಲು ಅನುಮತಿ ನೀಡಬೇಕು. ಅರಣ್ಯ ಪ್ರದೇಶ ಸುತ್ತಲೂ ಬಂಡೀಪುರ ಅಭಯಾರಣ್ಯ ಮಾದರಿಯ ಕಾರಿಡಾರ್ ಯೋಜನೆ ಜಾರಿಗೊಳಿಸಬೇಕು ಎಂದರು.
ಅರಣ್ಯದ ಸುತ್ತಮುತ್ತಲಿನ ಹೊಲ ಗದ್ದೆಗಾಗಿ ರಸ್ತೆ ವ್ಯವಸ್ಥೆ ಕಲ್ಪಿಸಿ, ವನ್ಯ ಪ್ರಾಣಿಗಳಿಂದ ಹಾನಿಗೊಳಗಾಗುವ ಬೆಳೆಗಳಿಗೆ ಕನಿಷ್ಠ 25 ಸಾವಿರ ಪರಿಹಾರ, ವನ್ಯಪ್ರಾಣಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 25 ಸಾವಿರ ರೂ. ಪರಿಹಾರ ನೀಡಿ. ದಾಳಿಯಲ್ಲಿ ಗಾಯಗೊಳ್ಳುವವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಶ್ಚಿಮ ಘಟ್ಟ ಪ್ರದೇಶದ ರೈತರು ಆಗ್ರಹಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 