ಶಾಸಕ ತಂಗಡಿಗಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ : ಶರಣಪ್ಪ ಕಾಯಿಗಡ್ಡಿ

ಕಾರಟಗಿ 23: ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನಕಾರ್ಯದರ್ಶಿ ಶರಣಪ್ಪ ಕಾಯಿಗಡ್ಡಿ  ಒತ್ತಾಯಿಸಿದರು.  

ಈ ಹಿಂದೆ ಕೃಷಿ ಉತ್ಪನ್ನ ಮಾರು ಕಟ್ಟೆ ಸಚಿವರಾಗಿ ಮತ್ತು ಸಣ್ಣ ನೀರಾವರಿ ಸಚಿವರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ, ರೈಸ್ ಟೆಕ್ ಪಾರ್ಕ, ಕೆರೆತುಂಬಿಸುವ ಯೋಜನೆ ಜಾರಿಗೆ ತಂದು ಜನಮಾನಸದಲ್ಲಿ ಉಳಿದಿದ್ದಾರೆ, ಕೊಪ್ಪಳ ಡಿಸಿಸಿ ಅಧ್ಯಕ್ಷ ರಾಗಿ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರದಲ್ಲಿ  3 ಸ್ಥಾನ ಕಾಂಗ್ರೆಸ್ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮತ್ತು ಕನಕಗಿರಿ ಕ್ಷೇತ್ರದಲ್ಲಿರುವ ಗಂಗಾಮತ ಸಮಾಜಕ್ಕೆ 1 ಕೋಟಿ 30 ಲಕ್ಷ ರೂಪಾಯಿ ಗಳ ಅನುದಾನ ಹಾಗೂ ಈ ಸಮಾಜವನ್ನು ಮುಖ್ಯವಾಹಿನಿಗೆ ತರುವುದಕ್ಕೆ ಸ್ಥಾನ -ಮಾನ ಕೊಟ್ಟು ಗುರುತಿಸಿದ್ದಾರೆ ಮತ್ತು ಕ್ಷೇತ್ರದಲ್ಲಿರುವ ಎಲ್ಲ ಸಮುದಾಯದ ವರಿಗೂ ಸಹ ಹೆಚ್ಚಿನ ಅನುದಾನ ಕೊಟ್ಟು ನಂಬಿಕೆ ಗಳಿಸಿಕೊಂಡಿದ್ದಾರೆ. ತಂಗಡಗಿಯವರು ಎಲ್ಲ ಸಮಾಜ ಗಳನ್ನು ಸಮಾನವಾಗಿ ನೋಡಿಕೊಳ್ಳುವ ನಾಯಕ ರಾಗಿದ್ದು, ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಕಾರಟಗಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಾಧ್ಯಕ್ಷ  ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.