ಎಸ್ಐಆರಿ್ಸ ಶಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
International Women's Day celebrated by SIRS branch
ಎಸ್ಐಆರಿ್ಸ ಶಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಳಗಾವಿ 20: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಎಸ್ಐಆರಿ್ಸಯ ಬೆಳಗಾವಿ ಶಾಖೆ ವತಿಯಿಂದ ದಿ.18ರಂದು ಮುನ್ನಾ ದಿನ ಇಲ್ಲಿನ ತಿಲಕವಾಡಿಯ ಶುಕ್ರವಾರಪೇಟೆ ಐಸಿಎಐ ಭವನದ ಶಿವನಾಗಿ-ಮರಾಠೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಸಮಾರಂಭವನ್ನು ಬೆಳಗಾವಿಯ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಸೌಭಾಗ್ಯ ಭಟ್ ಉದ್ಘಾಟಿಸಿ ಮಾತನಾಡಿ ಇಂದಿನ ಕಾರ್ಯನಿರತ ಜೀವನದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳು ಮತ್ತು ಮಹಿಳೆಯರು ತಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಹೇಗೆ ನೋಡಿಕೊಳ್ಳಬೇಕು ಎಂಬುದರ ಕುರಿತು ವಿವರಿಸಿದರು.
ಸಿಎ ಜ್ಯೋತಿ ಮಠದ್ ಅವರು ತಮ್ಮ 35 ವರ್ಷಗಳ ವೃತ್ತಿಪರ ಪ್ರಯಾಣದಲ್ಲಿ ಕೆಲಸದ ಜೀವನ ಮತ್ತು ವೈಯಕ್ತಿಕ ಜೀವನದ ಸಮತೋಲನದ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.
ಅಧ್ಯಕ್ಷ ಸಿಎ ವೀರಣ್ಣ ಎಂ. ಮುರ್ಗೋಡ್ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯ ಪಾತ್ರವನ್ನು ಪ್ರಸ್ತಾಪಿಸಿದರು. ಸಿಎ ವನಿತಾ ಬಿರ್ಜೆ ನಿರೂಪಿಸಿದರು, ಸಿಎ ಸಂಜೀವ್ ದೇಶಪಾಂಡೆ ಧನ್ಯವಾದಗಳನ್ನು ಅರ್ಿಸಿದರು.
ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸಿಎ ಅನಿಲ್ ರಾಮದುರ್ಗ, ಸಿಎ ಪ್ರಸಾದ್ ಸೋಲಾಪುರಮಠ, ಸಿಎ ಗೌರಿ ನಾಯಕ್, ಬೆಳಗಾವಿ ಸಿಎ ಅಸೋಸಿಯೇಷನ್ ಅಧ್ಯಕ್ಷೆ, ಬೆಳಗಾವಿ ಸಿಎ ಅಸೋಸಿಯೇಷನ್ ಸದಸ್ಯರು ಸಿಎ ನಿಕಿತಾ ಅಸುಂಡಿ ಮತ್ತು ಇತರರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 