ಅಸ್ಸಾಂನಲ್ಲಿ 10 ದಿನಗಳ ನಂತರ ಇಂಟರ್ನೆಟ್ ಸೇವೆ ಪುನಾರಂಭ
ಗುವಾಹಟಿ,
ಡಿ.20 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಂಟಾದ ಹಿಂಸಾತ್ಮಕ ಪ್ರತಿಭಟನೆಯ ನಂತರ ಅಮಾನತುಗೊಂಡ
10 ದಿನಗಳ ನಂತರ ಅಸ್ಸಾಂನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳು ಇಂದು ಬೆಳಗ್ಗೆ 9 ಗಂಟೆಗೆ ಪುನಾರಂಭಗೊಂಡಿವೆ.ಪೌರತ್ವ
ತಿದ್ದುಪಡಿ ಕಾಯ್ದೆಯ ವಿರುದ್ಧ ಹಿಂಸಾಚಾರ ಭುಗಿಲೆದ್ದ ಡಿಸೆಂಬರ್ 11ರ ಸಂಜೆಯಿಂದ ಇಲ್ಲಿ ಅಂತರ್ಜಾಲ
ಸೇವೆಯನ್ನು ಅಮಾನತುಗೊಳಿಸಲಾಗಿತ್ತು.ಗುವಾಹಟಿ ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶ ಹೊರಡಿಸಿ, ಮೊಬೈಲ್
ಇಂಟರ್ನೆಟ್ ಸೇವೆಗಳನ್ನು ನಿನ್ನೆ 6 ಗಂಟೆಗೆ ಮರುಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.ಆದಾಗ್ಯೂ
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಇಂದು ಬೆಳಗ್ಗೆ ಸೇವೆಯನ್ನು ಪುನಾರಂಭಿಸಲಾಗಿದೆ.ಎಲ್ಲಾ ಸೇವಾ
ಪೂರೈಕೆದಾರರ ಬ್ರಾಡ್ಬ್ಯಾಂಡ್ ಸೇವೆಯನ್ನು ಡಿಸೆಂಬರ್ 17 ರಿಂದ ಸರ್ಕಾರವು ಪುನಃಸ್ಥಾಪಿಸಲು ಅನುಮತಿಸಿತ್ತು,
ಆದರೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.2014 ರ ಡಿಸೆಂಬರ್ 31ರ ಮೊದಲು ಬಾಂಗ್ಲಾದೇಶ,
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಿದ್ದ ಅಕ್ರಮ ಹಿಂದೂ, ಪಾರ್ಸಿ, ಸಿಖ್, ಜೈನ್, ಬೌದ್ಧ ಮತ್ತು ಕ್ರಿಶ್ಚಿಯನ್
ವಲಸಿಗರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಪಿಸುವ ಸಿಎಎ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ
ನಡೆಯುತ್ತಿದೆ. ನೆರೆಯ ಬಾಂಗ್ಲಾದೇಶದ ಮುಸ್ಲಿಮೇತರರ
ಆಗಮನದಿಂದ ನಮ್ಮ ಸಂಸ್ಕೃತಿ, ಭಾಷೆ ನಾಶವಾಗುತ್ತದೆ ಎಂಬ ಭಯದಿಂದಾಗಿ ಇದನ್ನು ಹಿಂಪಡೆದುಕೊಳ್ಳುವಂತೆ
ಈಶಾನ್ಯ ರಾಜ್ಯಗಳ ಜನರು, ವಿಶೇಷವಾಗಿ ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳ ಜನರು ಒತ್ತಾಯಿಸುತ್ತಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 