ನಟಿ ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ
Investigation ordered against actress Ranya Rao's stepfather DGP Ramachandra Rao
ಬೆಂಗಳೂರು 11: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ರಾಮಚಂದ್ರ ರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರಗ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ತನಿಖಾಧಿಕಾರಿಯು ತಕ್ಷಣ ತನಿಖೆಯನ್ನು ಪ್ರಾರಂಭಿಸಿ ಒಂದು ವಾರದೊಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗೆ ಈ ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಮತ್ತು ಸಹಾಯವನ್ನು ಒದಗಿಸುವಂತೆ ಸೂಚಿಸಲಾಗಿದೆ.
ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ರಾಮಚಂದ್ರ ರಾವ್ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.
ರನ್ಯಾ ರಾವ್ ಅವರು ತಾವು ಐಪಿಎಸ್ ಅಧಿಕಾರಿಯ ಪುತ್ರಿ ಎಂದು ಹೇಳಿಕೊಂಡು ವಿಮಾನ ನಿಲ್ದಾಣಗಳಲ್ಲಿ ಶಿಷ್ಠಾಚಾರ ನಿಮಯ ಉಲ್ಲಂಘನೆ ಮಾಡಿ, ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಗೌರವ್ ಗುಪ್ತಾ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 