ಯುಪಿಯಲ್ಲಿ ಪ್ರತಿಭಟನಾಕಾರರು ಮಾಡಿದ್ದು ಸರಿಯೇ ? ಮೋದಿ ತಿರುಗೇಟು
modi
ಲಕ್ನೋ , ಡಿ 25 ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಉತ್ತರಪ್ರದೇಶದಲ್ಲಿ ನಡೆದ ಹಿಂಸಾಚಾರವನ್ನು
ಪ್ರಧಾನಿ ನರೇಂದ್ರ ಮೋದಿ ಬುಧವಾರ ಖಂಡಿಸಿದ್ದಾರೆ. ಕಾಯಿದೆ ವಿರೋಧಿಸುವ ನೆಪದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದು ಸರಿಯೇ? ಎಂದು ಆತ್ಮಾವಲೋಕನ ಮಾಡುವ ಅವಶ್ಯಕತೆಯಿದೆ
ಎಂದೂ ಕೇಳಿದ್ದಾರೆ. ಲಕ್ನೋದ ಅಟಲ್ ಬಿಹಾರಿ ವೈದ್ಯಕೀಯ
ವಿಶ್ವವಿದ್ಯಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ
ಮೋದಿ ಈ ಪ್ರಶ್ನೆ ಹಾಕಿದ್ದಾರೆ. ಸಾರ್ವಜನಿಕ ಆಸ್ತಿಪಾಸ್ತಿಗೆ
ಹಾನಿಮಾಡಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರು ತಾವು ಮಾಡಿದ್ದು ಸರಿಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು
ಎಂದು ಆಗ್ರಹ ಪಡಿಸಿದರು. 'ಉತ್ತಮ ರಸ್ತೆಗಳು, ಸಾರಿಗೆ ಮತ್ತು ಒಳಚರಂಡಿ ನಮ್ಮ ಹಕ್ಕು ಗುಣಮಟ್ಟದ ಶಿಕ್ಷಣ ನಮ್ಮ ಹಕ್ಕು ಆದರೆ ಶಿಕ್ಷಣ ಸಂಸ್ಥೆಗಳ ಮೌಲ್ಯ ಮತ್ತು ಶಿಕ್ಷಕರನ್ನು ಅದೆ ರೀತಿ ಪೊಲೀಸರ ಕೆಲಸವನ್ನು ಗೌರವಿಸುವುದು ನಾಗರಿಕರ ಕರ್ತವ್ಯ'ಎಂದು
ಅವರು ತಿರುಗೇಟು ನೀಡಿದರು.'ಸಂವಿದಾನದ 370 ನೆ ವಿಧಿ
ಮತ್ತು ರಾಮಮಂದಿರದ ಸಮಸ್ಯೆಗಳನ್ನು ಶಾಂತಿಯುತವಾಗಿ
ಪರಿಹರಿಸಲಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ನಿರಾಶ್ರಿತರಿಗೆ ಪೌರತ್ವ ನೀಡುವ ಮಾರ್ಗವನ್ನು
ತೆರವುಗೊಳಿಸಲಾಗಿದೆ. ನೂರ ಮೂವತ್ತು ಕೋಟಿ ಭಾರತೀಯರು ಇಂತಹ ಸವಾಲುಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ
ಕಂಡುಕೊಂಡಿದ್ದಾರೆ 'ಎಂದು ಅವರು ಹೇಳಿದರು.ಇದೆ
11 ರಂದು ಸಂಸತ್ತು ಅಂಗೀಕರಿಸಿದ ಕಾನೂನನ್ನು ವಿರೋಧಿಸಿ ಉತ್ತರಪ್ರದೇಶದಾದ್ಯಂತ ಹದಿನೆಂಟು
ಜನರು ಸಾವನ್ನಪ್ಪಿದ್ದಾರೆ. ಪ್ರತಿಭಟನಾ ವೇಳೆ ಪ್ರತಿಭಟನಾಕಾರರು ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು
100 ಕೋಟಿ ರೂಪಾಯಿಗಳ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ.ಇದು
ಸರಿಯೆ? ಆತ್ಮವಲೋಕನ ಮಾಡಿಕೊಳ್ಳಲಿ ಎಂದು ಪ್ರತಿಭಟನಾನಿರತರಿಗೆ ನಯವಾಗಿಯೇ ಮೋದಿ ಚಾಟಿಬೀಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 