ಜೇಟ್ಲಿ ನಿಧನ: ಪೂರ್ವ ನಿಯೋಜಿತ ಕಾರ್ಯ ಬದಿಗೊತ್ತಿ ದೆಹಲಿಗೆ ಹಿಂತಿರುಗಿದ ಅಮಿತ್ ಶಾ
ಹೈದರಾಬಾದ್, ಆ 24 ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹೈದರಾಬಾದ್ ಭೇಟಿಯನ್ನು ಅರ್ಧಕ್ಕೇ ನಿಲ್ಲಿಸಿ ದೆಹಲಿಗೆ ವಾಪಸಾಗಿದ್ದಾರೆ
ಪೂರ್ವ ನಿಗದಿಯಂತೆ ಶನಿವಾರ ಹೈದರಾಬಾದ್ ನಲ್ಲಿಯೇ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿಯಾಗಬೇಕಿತ್ತು
ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಪ್ರೊಬೆಷನರ್ಗಳ ಪಾಸಿಂಗ್ ಪೆರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮಿತ್ ಶಾ, ಅರುಣ್ ಜೇಟ್ಲಿ ನಿಧನದ ಸುದ್ದಿ ತಿಳಿದು ತೀವ್ರ ಶೋಕ ವ್ಯಕ್ತಪಡಿಸಿದರು
ಅರುಣ್ ಜೇಟ್ಲಿಯವರು ಕೇವಲ ಪಕ್ಷದ ಮುಖಂಡರಾಗಿರಲಿಲ್ಲ ಬದಲಿಗೆ ನಮ್ಮ ಕುಟುಂಬದ ಸದಸ್ಯರಲ್ಲೊಬ್ಬರಾಗಿದ್ದರು ಎಂದು ಅಮಿತ್ ಶಾ ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 