ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ: ಜಮೀರ್ ಅಹ್ಮದ್, ಸುರೇಶ್ ಕುಮಾರ್
ಬೆಂಗಳೂರು, ಏ.2,ಕೊರೊನಾ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಸಾರ್ವಜನಿಕರು ಹಲ್ಲೆ, ಯತ್ನ ಮಾಡುತ್ತಿರುವುದು ಬೆಳಕಿಗೆ ಬರುತ್ತಿದೆ. ಈ ಕುರಿತು ಮಾಜಿ ಸಚಿವ ಜಮೀರ್ ಅಹ್ಮದ್, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳಿಗೆ ಸಹಕಾರ ನೀಡದೆ, ಅವರ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ ಎಂದು ಅವರು ಟ್ವೀಟ್ ಮಾಡಿದ್ದಾರೆ.ಈ ಇಲಾಖೆಗಳೆಲ್ಲ ತಮ್ಮ ಜೀವದ ಹಂಗುತೊರೆದು ಹಗಲಿರುಳು ಕೆಲಸ ಮಾಡುತ್ತಿರುವುದು ಜನರ ಆರೋಗ್ಯ ರಕ್ಷಣೆಗೆ, ಇದನ್ನು ಪ್ರತಿಯೊಬ್ಬರೂ ಅರಿಯಬೇಕು. ತಮ್ಮ ಆರೋಗ್ಯದ ಮಾಹಿತಿ ಕೇಳಿ ಬರುವ ಸರ್ಕಾರಿ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಿ, ಆರೋಗ್ಯ ಸಮಸ್ಯೆ ಇದ್ದವರು ಹತ್ತಿರದ ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿ ಎಂದಿದ್ದಾರೆ.ಇನ್ನು ದೇಶವೇ ಕೊರೊನಾ ವಿರುದ್ಧ ಒಂದಾಗಿ ಹೋರಾಡುತ್ತಿರುವಾಗ ಉದ್ಧಟತನದ ಪ್ರದರ್ಶನ ಬೇಡ. ಸಹಕಾರ ಮತ್ತು ಸಂಯಮವೇ ಕೊರೊನಾ ತಡೆಗಟ್ಟಲು ಇರುವ ಏಕೈಕ ದಾರಿ ಎಂದು ಅವರು ಟ್ವಿಟರ್ ಮೂಲಕ ಜನತೆಯಲ್ಲಿ ಮನವಿ ಮಾಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ, ತಮ್ಮ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡ ಹೊರಟಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಉಗುಳಿರುವ ದುರುಳರಿಗೆ ಯಾವ ಕ್ಷಮೆಯೂ ಇಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 