ಜಮಖಂಡಿ : ಯುವಕನಿಗೆ ಚಾಕುವಿನಿಂದ ಇರಿದು ಹಲ್ಲೆ
Jamkhandi: Young man stabbed and attacked with a knife
ಲೋಕದರ್ಶನ ವರದಿ,
ಜಮಖಂಡಿ 20 : ನಗರದ ಮಟ್ಟನ್ ಮಾರ್ಕೆಟ್ ಬಳಿ ಯುವಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಜರುಗಿದೆ. ರಾತ್ರಿ ಸಮಯದಲ್ಲಿ ಮುಸ್ಲಿಂ ಯುವಕರ ನಡುವೆ ಜಗಳ- ಗಲಾಟೆ ಶುರುವಾಗಿದ್ದು. ಅಲ್ಲಿಗೆ ಕೆಲವಂದಿಂಷ್ಟು ಹಿಂದು ಯುವಕರ ಸಹ ಸೇರಿದ್ದಾರೆ. ಹಿಂದು ಯುವಕರ ಮಧ್ಯ ಮುಸ್ಲಿಂ ಯುವಕರ ನಡುವೆ ಹೊಡೆದಾಟ ತೀವ್ರ ಸ್ವರೂಪಕ್ಕೆ ತಿರುಗಿದ ಹಿನ್ನಲೆಯಲ್ಲಿ ಹನುಮಂತ ಶಿವಾಜಿ ಗಾಡಿವಡ್ಡರ (18) ಯುವಕನಿಗೆ ಮುಸ್ಲಿಂ ಯುವಕರು ಸೇರಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಚಾಕುವಿನಿಂದ ಇರಿತಕ್ಕೆಗೊಳಗಾದ ಹನುಮಂತ ಶಿವಾಜಿ ಗಾಡಿವಡ್ಡರ ಯುವಕನನ್ನು ಜಮಖಂಡಿ ಸರಕಾರಿ ಉಪವಿಭಾಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಶಹರ ಪೋಲಿಸ್ ಠಾಣೆಯ ಪಿಎಸ್ಐ, ಅನೀಲ ಕುಂಬಾರ, ಸಿಬಂಧಿಗಳಾದ ಸದಾಶಿವ ಹೊಸೂರ, ಲೋಕೇಶ ಯಳಶೆಟ್ಟಿ, ಶಕಂರ ಆಸಂಗಿ, ಶೇಖರ ನಾಯಕ, ಶಂಕರ ಮೂಲಿಮನಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 