ಜಮ್ಮು ಕಾಶ್ಮೀರ : ಭಾರತದ ನಿಲುವಿಗೆ ಬಾಂಗ್ಲಾದೇಶ ಬೆಂಬಲ
ಢಾಕಾ, ಆ 21 ಜಮ್ಮು ಕಾಶ್ಮೀರದ ವಿಷಯದಲ್ಲಿ ಭಾರತ ತಳೆದಿರುವ ನಿಲುವಿಗೆ ಬಾಂಗ್ಲಾದೇಶ ಬುಧವಾರ ಬೆಂಬಲ ಸೂಚಿಸಿದೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುತ್ತಿದ್ದ 370ನೇ ವಿಧಿಯ ರದ್ದತಿ ಭಾರತ ಸರ್ಕಾರದ ಆಂತರಿಕ ವಿಚಾರ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅಭಿವೃದ್ಧಿಗೆ ಕೂಡ ಎಲ್ಲ ದೇಶಗಳೂ ಆದ್ಯತೆ ನೀಡಬೇಕು ಎಂದು ಬಾಂಗ್ಲಾದೇಶ ಯಾವಾಗಲೂ ತಾತ್ವಿಕವಾಗಿ ಪ್ರತಿಪಾದಿಸಿದೆ ಎಂದು ಸಚಿವಾಲಯದ ಹೇಳಿಕೆ ಸ್ಪಷ್ಟಪಡಿಸಿದೆ. ಜಮ್ಮು ಕಾಶ್ಮೀರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದ್ದ 370ನೇ ವಿಧಿ ಹಾಗೂ 35 ಎ ಪರಿಚ್ಛೇದವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ 5ರಂದು ರದ್ದುಪಡಿಸಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 