ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ: ಬಿ ಶ್ರೀರಾಮುಲು
Janardhana Reddy is trying to finish me off politically: B Sriramulu
ಬೆಂಗಳೂರು 22: ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಅವರು ತಮ್ಮ ಆಪ್ತ ಸ್ನೇಹಿತ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.
ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳರೋದು ಸ್ಪಷ್ಟವಾಗಿದೆ ಎಂದರು.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು, ರೆಡ್ಡಿ ವಿರುದ್ಧ ಕಿಡಿಕಾರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 