ಜನತಾ ದರ್ಶನ : 1067 ಅಹವಾಲುಗಳ ಸ್ವೀಕೃತಿ
Janata Darshan: 1067 petitions received
ಗದಗ 28 : ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಜನಸಾಮಾನ್ಯರಿಂದ ಅಹವಾಲುಗಳ ಮಹಾಪೂರವೆ ಹರಿದು ಬಂದಿದೆ.ಸಾರ್ವಜನಿಕರಿಂದ 767 ಅಹವಾಲುಗಳು ನೇರವಾಗಿ ದಾಖಲಾಗಿವೆ, 300 ಆನ್ ಲೈನ್ ಮೂಲಕ ಅರ್ಜಿಗಳು ಬಂದಿದ್ದು, ಒಟ್ಟು 1067 ವಿವಿಧ ರೀತಿಯ ಅಹವಾಲುಗಳು ಜನತಾ ದರ್ಶನದಲ್ಲಿ ಸ್ವೀಕೃತವಾಗಿವೆ.ಇವುಗಳಲ್ಲಿ 900 ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. 150 ಅಹವಾಲುಗಳನ್ನು ವಿವರವಾಗಿ ಪರೀಶಿಲನೆ ನಡೆಸಲಾಗಿದೆ.ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಶಾಂತಿ, ಶಿಸ್ತಿನಿಂದ ಜರುಗಿದ್ದು, ಇದಕ್ಕೆ ಡಿಸಿ ಸಿ ಎನ್ ಶ್ರೀಧರ, ಎಸ್ಪಿ ರೋಹನ್ ಜಗದೀಶ್, ಡಿಸಿಎಪ್ ಸಂತೋಷ ಕುಮಾರ ಸೇರಿದಂತೆ ಎಲ್ಲ ಅಧಿಕಾರಿಗಳು ಕಾರಣೀಕರ್ತರಾಗಿದ್ದಾರೆ, ಎಲ್ಲರೀಗೂ ಅಭಿನಂದನೆಗಳು ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.ಡಾ. ವೆಂಕಟೇಶ ಆಲ್ಕೊಡ್ ತಂಡದ ಪ್ರಾರ್ಥನೆ, ನಾಡಗೀತೆಯೊಂದಿಗೆ ಆರಂಭವಾದ ಜನತಾ ದರ್ಶನ ಅಂತಿವಮಾಗಿ ಪೊಲೀಸ್ ಬ್ಯಾಂಡನ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 