ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ರಾಠೋಡ
Join hands to eradicate child labour: Rathod
ಇಂಡಿ 12: ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಇಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ಠಾಡೋಡ ಅವರು ಬಾಲ ಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗಾಗಿದ್ದು, ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೇ ಶಿಕ್ಷಣದ ಮುಖ್ಯ ವಾಹಿನಿಗೆ ತರಬೇಕು. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು. ನಂತರ ಮಾತನಾಡಿ ಇಂಡಿ ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕರಾದ ಸಾಹೀಲ್ ಧನಶಟ್ಟಿ ಅವರು ಮಾತನಾಡಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೆ? ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ತುಂಬಾ ಇದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ, ವ್ಯವಸ್ಥಾಪಕರಾದ ಮುರಗೇಶ ನಾರಾಯಣಪುರ, ವಾಯ್ ಡಿ ಮನಗೂಳಿ, ಶ್ರೀಮತಿ ಸುಮಿತ್ರಾ ಎಂ ನಾಯಕ ಭಾರತಿ ಹದ್ದೇವಾಡಿ, ರಾಜೇಶ್ವರಿ ಕುಂಬಾರ, ರಾಜು ಚವ್ಹಾಣ, ಪ್ರಭಾಕರ ಪೂಜಾರಿ, ಯಲ್ಲಪ್ಪ ಮಾದರ, ಸಿದ್ದು ಲೋನಿ, ಮಹಾದೇವ ಕೇರುಟಗಿ, ಎಂ ಎಸ್ ಪಾಟೀಲ್, ಹಣಮಂತ ಮೇಟಿ, ಪ್ರದೀಪ ಹಿಳ್ಳಿ, ರಾಮಗೌಡ ಸರಬಡಗಿ, ಅರುಣ್ ವಾಘಮೂರೇ, ಪ್ರದೀಪ , ನೀತಿನ ಹೊಟಕರ ಕಾಲೇಸಾಬ ಸೈಯದ, ಆನಂದ ಹಾದಿಮನಿ ಸೇರಿದಂತೆ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 