ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಹೊಸಮನೆ ಹೇಳಿಕೆ
Justice Rajesh Hosamane's statement at the World Caregiver's Day event
ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಹೊಸಮನೆ ಹೇಳಿಕೆ
ಬಳ್ಳಾರಿ 29: ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷ ಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಚೇತನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅವರ ಸೇವೆ ಮಾಡುವಂತಹ ಪೋಷಕರು, ಶಿಕ್ಷಕರು, ಆಯಾಗಳು ದೇವರ ಸಮಾನ ಎಂದು ಆರೈಕೆದಾರರ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಧರ್ಮ ಕ್ಷೇತ್ರದ ಕೋಶಾಧಿಕಾರಿಗಳಾದ ಫದಾರ್ ಐವನ್ ಫಿಂಟೂ, ಚೆಂಗಾರೆಡ್ಡಿ, ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಗುರುಮೂರ್ತಿ, ಅನುಗ್ರಹ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆಯ ಮುಖ್ಯ ಗುರುಗಳಾದ ಸಿಸ್ಟರ್ ಪ್ರಜ್ಞಾ, ಅನುಗ್ರಹ ಶಾಲೆಯ ಹಿರಿಯ ಶಿಕ್ಷಕಿ ಸಿಸ್ಟರ್ ಮರ್ಲಿನ್, ಶಿಕ್ಷಕರಾದ ವಸಂತ್ ಕುಮಾರ್, ಆರೈಕೆದಾರರ ಪರವಾಗಿ ಪೋಷಕರಾದ ಶಿವರಾಮ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 