ಕಲಬುರಗಿ ಇನ್ನು ಬೆಂಗಳೂರಿಗೆ ಬಹಳ ಹತ್ತಿರ..!!
ಕಲಬುರಗಿ, ಆ. 25 ಕಲಬುರಗಿ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆ ಉದ್ದೇಶಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಶನಿವಾರ ಹಸ್ತಾಂತರ ಮಾಡಲಾಗಿದೆ. ಇದರಿಂದ ಹಿಂದುಳಿದ ಹೈದರಾಬಾದ್-ಕರ್ನಾಟಕ ಪ್ರದೇಶ ಈಗ ಬೆಂಗಳೂರಿಗೆ ಬಹಳ ಹತ್ತಿರವಾಗಿದ್ದು ಈ ಭಾಗದ ಜನರು ರಾಜಧಾನಿಯ ಜೊತೆ ಹೆಚ್ಚಿನ ಒಡನಾಟ ಇಟ್ಟುಕೊಳ್ಳಲು ಸಹಕಾರಿಯಾಗಲಿದೆ. ಜೊತೆಗೆ ಬಹಳ ಹತ್ತಿರವಾಗಲಿದೆ.!! ಕಲಬುರಗಿ ವಿಮಾನ ನಿಲ್ದಾಣವನ್ನು ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ವಿಮಾನ ಕಾರ್ಯಾಚರಣೆಗಾಗಿ ಆಯ್ಕೆ ಮಾಡಲಾಗಿದೆ. ಅಲೈಯನ್ಸ್ ಏರ್ ಮತ್ತು ಘೋಡವತ್ ಏರ್ ಪ್ರೈವೇಟ್ ಲಿಮಿಟೆಡ್ ಕಲಬುರಗಿ-ಬೆಂಗಳೂರು-ಕಲಬುರಗಿ, ಕಲಬುರಗಿ-ಹಿಂಡನ್-ಕಲಬುರಗಿ ಮತ್ತು ಕಲಬುರಗಿ-ತಿರುಪತಿ-ಕಲಬುರಗಿ ಮಾರ್ಗಗಳಿಗೆ 'ಆಯ್ದ ವಿಮಾನಯಾನ ಆಪರೇಟರ್ (ಎಸ್ಎಒ) ಎಂಬ ಅರ್ಹತೆ ಪಡೆದಿವೆ ಎಂದು ಸರಕಾರಿ ಹೇಳಿಕೆ ತಿಳಿಸಿದೆ. ಸರ್ಕಾರಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರದ ನಡುವೆ ಈ ಕುರಿತು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ಇದರ ಪರಿಣಾಮವಾಗಿ,ಇನ್ನು ಮುಂದೆ ಕಲಬುರಗಿ ವಿಮಾನ ನಿಲ್ದಾಣವನ್ನು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿವೃದ್ಧಿಪಡಿಸಿ, ನಿರ್ವಹಣೆ ಮಾಡಲಿದೆ. ಮಾರ್ಚ್ 2007 ರಲ್ಲಿ ಕಲಬುರಗಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ ಸರಕಾರ ಸಮ್ಮತಿ ನೀಡಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 