ಶೇಷನ್ ನಿಧನಕ್ಕೆ ಪ್ರಧಾನಿ ಕಂಬನಿ
ನವದೆಹಲಿ, ನ 11 : ಪ್ರಜಾಪ್ರಭುತ್ವವದ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ, ನಂಬಿಕೆ, ವಿಶ್ವಾಸಾರ್ಹತೆ ಮೂಡಿಸುವಲ್ಲಿ ಚುನಾವಣಾ ಆಯೋಗದ ಮಾಜಿ ಆಯುಕ್ತ ಟಿ ಎನ್ ಶೇಷನ್ ಅವರು ನಿರ್ವಹಿಸಿದ ಪಾತ್ರವನ್ನು ದೇಶ ಮರೆಯಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಶೇಷನ್ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ನಾಗರಿಕ ಸೇವೆ ಅಧಿಕಾರಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಅವರ ನಿಧನ ಭರಿಸಲಾಗದ ನೋವು ತಂದಿದೆ. ಓಂ ಶಾಂತಿ ಎಂದಿದ್ದಾರೆ. ಐ ಎ ಎಸ್ ಅಧಿಕಾರಿಯಾಗಿದ್ದ ಶೇಷನ್ ಅವರು ರಾಜೀವ್ ಗಾಂಧಿ ಕಾಲದಲ್ಲಿ ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿ, ಮುಂದೆ ಸಂಪುಟ ಕಾರ್ಯದರ್ಶಿಯಾಗಿ ಬಡ್ತಿ ಪಡೆದಿದ್ದರು. ವಿ.ಪಿ.ಸಿಂಗ್ ಸರ್ಕಾರ ಇವರನ್ನು ಯೋಜನಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 