ಕಂಪ್ಲಿ: ನವಕರ್ನಾಟಕ ಯುವಶಕ್ತಿ ಸಂಘ ಪ್ರತಿಭಟನೆ
ಲೋಕದರ್ಶನ ವರದಿ
ಕಂಪ್ಲಿ 22: ಸುರಕ್ಷತಾ ಪರಿಕರ ನೀಡದೆ ನಂ.10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಖಾತ್ರಿ ಕಾಮರ್ಿಕರಿಂದ ಗಿಡಗಂಟಿ ತೆರವು ಕಾರ್ಯಕ್ಕೆ ಮುಂದಾಗಿರುವ ಗ್ರಾಪಂ ಕ್ರಮ ಖಂಡಿಸಿ ಸ್ಥಳೀಯ ನವ ಕರ್ನಾಟಕ ಯುವಶಕ್ತಿ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.
ಸಂಘದ ಕ್ಷೇತ್ರಾಧ್ಯಕ್ಷ ಬಿ.ವಿರೂಪಾಕ್ಷಿ ಮಾತನಾಡಿ, ಗ್ರಾಮದ ವಿಜಯನಗರ ಕಾಲುವೆಗೆ ಚರಂಡಿ ನೀರು ಹರಿಸಲಾಗುತ್ತಿದೆ. ಅಲ್ಲದೇ ಸಮರ್ಪಕ ನಿರ್ವಹಣೆ ಇಲ್ಲದೇ ಗಿಡಗಂಟಿಗಳಿಂದ ಆವೃತವಾಗಿದೆ.
ಕಾಲುವೆಯಲ್ಲಿನ ಜಾಲಿಗಿಡ, ಕಸ ತೆರವಿಗಾಗಿ ಗ್ರಾಪಂ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಿದೆ. ಆದರೆ, ಕಾಮರ್ಿಕರಿಗೆ ಗ್ಲೌಸ್,ಮಾಸ್ಕ್,ಬೂಟ್ ನೀಡದೇ ಕಾಲುವೆಗಿಳಿಸಿದ್ದು ಖಂಡನೀಯ ಎಂದರು. ಶೀಘ್ರವೇ ಕಾಮರ್ಿಕರಿಗೆ ರಕ್ಷಣಾ ಸಾಮಗ್ರಿ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಂಘದ ಶೆರಗೇರು ಗೋಪಾಲ್, ಜೆ.ಶಿವಕುಮಾರ್, ಎಚ್.ಎಂ.ಸಂತೋಷ್, ಬಸವರಾಜ, ಹೊನ್ನೂರಸ್ವಾಮಿ, ಎನ್.ಶ್ರೀನಿವಾಸ್, ಕೆ.ಶಿವಕುಮಾರ್, ಜೆ.ಜಡೇಶ್, ರೈತ ಸಂಘದ ಕಂಪ್ಲಿ ತಾಲೂಕು ಉಪಾಧ್ಯಕ್ಷ ಆನೆಗುಂದಿ ಬಸವರಾಜ ಇತರರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 