ಮುಗಳಿಹಾಳದಲ್ಲಿ ಅಲಂಕರಿಸಿದ ಎತ್ತುಗಳಿಂದ ಕಾರ ಹುಣ್ಣಿಮೆ ಆಚರಣೆ
Kara Hunnime celebration with decorated bulls in Mugalihal
ಯರಗಟ್ಟಿ 12: ರೈತರ ಮೊದಲ ಹಬ್ಬ ಕಾರಹುಣ್ಣಿಮೆ ನಿಮಿತ್ಯ ಬುಧವಾರ ರೈತರು ತಮ್ಮ ಎತ್ತುಗಳಿಗೆ ಅಲಂಕಾರಿಕ ವಸ್ತುಗಳನ್ನು ಖರೀದಿಸಿ ಅಲಂಕರಿಸಿದರು.
ಎತ್ತುಗಳಿಗೆ ಅಲಂಕರಿಸುವ ಮಗಡ, ಮುಗಧಾರ, ಕೊರಳಲ್ಲಿ ಕಟ್ಟುವ ಲಡ್ಡು, ಕೋಡಿಗೆ ಅಲಂಕರಿಸುವ ಗೊಂಡೆ, ಗಾಡಿಗೆ ಅಲಂಕರಿಸುವ ವಿವಿಧ ಶೃಂಗಾರ ಸಾಮಾನುಗಳ ಖರೀದಿ ಜೋರಾಗಿ ನಡೆಯಿತು.ಕರಿಹರಿಯುವ ವಿಶೇಷ ಹಬ್ಬ: ಕಾರ ಹುಣ್ಣಿಮೆ ದಿನ ಅಲಂಕಾರಗೊಳಿಸಿದ ಜೋಡೆತ್ತುಗಳನ್ನು ಸಮೀಪದ ಮುಗಳಿಹಾಳ ಗ್ರಾಮದಲ್ಲಿ ತಂದು ಅಗಸಿಗೆ ಕಟ್ಟಿರುವ ಬೇವಿನ ತಪ್ಪಲಿನ ತೋರಣ ಹರಿದುಕೊಂಡು ಮುನ್ನುಗ್ಗುವ ಆಟ ಇದಾಗಿದ್ದು, ಯಾವ ಎತ್ತು ಮೊದಲು ಮುಂದು ಬರುತ್ತದೆ. ಆ ಎತ್ತಿಗೆ ರೈತರು ಹಿಂಗಾರು ಮತ್ತು ಮುಂಗಾರು ಎಂದು ಪರಿಗಣಿಸುತ್ತಾರೆ. ಈ ಆಟಕ್ಕೆ ರೈತರು ತಮ್ಮ ಎತ್ತುಗಳೊಂದಿಗೆ ಅಗಸಿಗೆ ಬಂದು ಅವುಗಳಿಗೆ ಹುರಿದುಂಬಿಸಿ ಓಡಿಸುತ್ತಾರೆ. ರೈತರ ಹಬ್ಬವಾದ ಕಾರಹುಣ್ಣಿಮೆಆಚರಿಸಲಾಗುತ್ತಿದೆ. ಗಾಡಿ ( ಎತ್ತಿನಬಂಡಿ) ಅಲಂಕರಿಸಿದ್ದಾರೆ.
ಕೃಷಿ ಕೆಲಸಕ್ಕೆ ಬಳಸುವ ವಸ್ತುಗಳ ಪೂಜೆ: ಉಳುಮೆಗೆ ಬಳಸುವ ನೇಗಿಲು, ಕುಂಟೆ, ಗಾಡಿ, ಬಾರಕೋಲು ಮತ್ತು ಇನ್ನಿತರ ಸಾಮಾನುಗಳಿಗೆ ಹುರಮಂಜು ಇಲ್ಲವೆ ಗುಲಾಲು ಹಚ್ಚಿ ಸಿಂಗರಿಸಿ ಪೂಜೆ ಮಾಡಲಾಗುತ್ತದೆ.
ಪ್ರಸಕ್ತ ವರ್ಷ ಬಿತ್ತನೆಗೆ ಅಗತ್ಯವಿದ್ದಷ್ಟು ತೇವಾಂಶವಾಗಿದ್ದು, ಹೆಚ್ಚಿನ ರೈತರು ಹಬ್ಬದ ದಿನದಂದೇ ಮುಂಗಾರು ಬಿತ್ತನೆಗೆ ಚಾಲನೆ ನೀಡಿದರು. ಊರಿನ ಹಿರಿಯರು, ಯುವಕರು ಮತ್ತಿತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 