ದೇವರಹಿಪ್ಪರಗಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ
Karahunnime celebration in Devarahipparagi
ದೇವರಹಿಪ್ಪರಗಿ 11: ಕಾರ ಹುಣ್ಣಿಮೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರೈತರು ಬುಧವಾರದಂದು ಎತ್ತುಗಳನ್ನು ವಿಶೇಷವಾಗಿ ಸಿಂಗರಿಸಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಪಟ್ಟಣದಲ್ಲಿ ಎತ್ತುಗಳಿಗೆ ಅಲಂಕಾರಿಕ ಬಣ್ಣಗಳನ್ನು ಹಚ್ಚಿ, ಕೋಡಣಸು, ಜೂಲುಗಳನ್ನು ಹಾಕಿ ಸಿಂಗರಿಸಲಾಗಿತ್ತು. ಸಂಜೆ ಪಟ್ಟಣದ ಮೇನ್ ಬಜಾರ್ ರಥದ ಮುಂದೆ ಸಾಂಪ್ರದಾಯಿಕವಾಗಿ ಎತ್ತುಗಳನ್ನು ಒಟ್ಟುಗೂಡಿಸಿ ಎತ್ತಿನ ಕೋಡು ಮತ್ತು ಕೊರಳಿಗೆ ಕಡುಬು, ವಡೆ, ಕರಚಿಕಾಯಿ, ಶೇಂಗಾಕಾಯಿ , ಕೊಬ್ಬರಿ ಬಟ್ಟಲು ಸೇರಿದಂತೆ ವಿವಿಧ ಖಾದ್ಯ ಪದಾರ್ಥಗಳನ್ನು ಕಟ್ಟಿ ಸಾಲಾಗಿ ನಿಲ್ಲಿಸಲಾಗಿತ್ತು. ಎತ್ತುಗಳಿಗೆ ಪೂಜೆ ಸಲ್ಲಿಸಿದ ನಂತರ ಎರಡು ಎತ್ತುಗಳಿಗೆ ಮುಂಗಾರು ಮತ್ತು ಹಿಂಗಾರು ಎಂದು ನಾಮಕರಣ ಮಾಡಿ ಐದು ಬಾರಿ ಓಡಿಸಲಾಯಿತು.
ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಂಪತ್ ಜಮಾದಾರ, ವೀರೇಶ ಕುದರಿ, ಮಹೇಶ ಅವಟಿ ಸೇರಿದಂತೆ ಯುವಕರು,ಗ್ರಾಮದ ಪ್ರಮುಖರು, ಗಣ್ಯರು ಹಾಗೂ ರೈತರು ಉಪಸ್ಥಿತರಿದ್ದರು .
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 