ಕಾರ್ಗಿಲ್ ವಿಜಯೋತ್ಸವ: ಸೈನಿಕರು ಮತ್ತು ರೈತರಿಗೆ ಸಮಾಜದಿಂದ ಸದಾ ಗೌರವ ಸಿಗಬೇಕು : ಕವಿತಾ ಮಿಶ್ರಾ
Kargil Victory Day: Soldiers and farmers should always receive respect from society: Kavita Mishra
ಲೋಕದರ್ಶನ ವರದಿ
ಬೆಳಗಾವಿ 26: ದೇಶದ ಗಡಿಯಲ್ಲಿ ಹಗಲಿರುಳು ಸೇವೆ ಸಲ್ಲಿಸುವ ಸೈನಿಕರ ತ್ಯಾಗದಿಂದಲೇ ದೇಶದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ಸಮಾಜ ನಿರಂತರ ಗೌರವ ನೀಡಬೇಕು ಎಂದು ಪ್ರಗತಿಪರ ರೈತ ಮಹಿಳೆ ಹಾಗೂ ಕೃಷಿ ಉದ್ಯಮಿ ಕವಿತಾ ಮಿಶ್ರಾ ಹೇಳಿದರು. ನಗರದ ಧರ್ಮನಾಥ ಭವನದಲ್ಲಿ ಮಾಜಿ ಸೈನಿಕರ ಮಹಾ ಒಕ್ಕೂಟದ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಮತ್ತು ಸೈನಿಕರು ದೇಶದ ನಿಜವಾದ ಯೋಧರು. ಅನ್ನದಾತರು ಹಾಗೂ ಗಡಿಯನ್ನು ಕಾಪಾಡುವ ಯೋಧರಿಗೆ ಸಮಾನ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕೆ ಅನ್ನ ನೀಡಿದ ರೈತರ ಸೇವೆಯನ್ನು ಸ್ಮರಿಸಿದ ಅವರು, ಮಹಿಳೆಯರು ಸ್ವಾಭಿಮಾನ ಹಾಗೂ ಸಂಸ್ಕಾರದೊಂದಿಗೆ ಬದುಕಿದಾಗ ಸಮಾಜ ಮತ್ತಷ್ಟು ಸದೃಢವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮಾಜಿ ಸೈನಿಕರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ಮಾತನಾಡಿ, ನಿವೃತ್ತ ಸೈನಿಕರಿಗೆ ಸರ್ಕಾರ ಸೂಕ್ತ ಗೌರವ ಹಾಗೂ ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸೈನಿಕರ ಸಮಸ್ಯೆಗಳ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದ್ದು, ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 