ಕರ್ನಾಟಕ, ಕೇರಳ, ಮಹಾರಾಷ್ಟ್ರ ನೆರೆ ಪರಿಹಾರ: ನೆರವು ವಸ್ತುಗಳ ಸಾಗಣೆ ಶುಲ್ಕ ರದ್ದುಗೊಳಿಸಿದ ರೈಲ್ವೆ
ನವದೆಹಲಿ, ಆಗಸ್ಟ್ 11 ಪ್ರವಾಹ ಪೀಡಿತ ಕನರ್ಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪರಿಹಾರ ಸಾಮಗ್ರಿಗಳ ಸಾಗಣೆಗೆ ಮೇಲಿನ ಸರಕು ಶುಲ್ಕ ರದ್ದುಗೊಳಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ. ಸರಕುಗಳ ರೈಲು ಅಥವಾ ಪಾಸರ್ೆಲ್ ವ್ಯಾನ್ ಮೂಲಕ ಅಂತರ್-ರಾಜ್ಯ ಮತ್ತು ಹೊರ ರಾಜ್ಯಗಳಿಂದ ನೆರವು ಮತ್ತು ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ರೈಲ್ವೆ ನಿರ್ಧರಿಸಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಪ್ರಮಾಣಿತ ಸಂಯೋಜನೆಯಲ್ಲಿ ಉಚಿತವಾಗಿ ನೆರವು ಕಳುಹಿಸಬಹುದು ಎಂದು ಭಾರತೀಯ ರೈಲ್ವೆ ಎಲ್ಲಾ ಜನರಲ್ ಮ್ಯಾನೇಜರ್ಗಳಿಗೆ ಶನಿವಾರ ತಡರಾತ್ರಿ ಅಧಿಸೂಚನೆ ನೀಢಿದೆ. ದೇಶಾದ್ಯಂತದ ಎಲ್ಲಾ ಸರ್ಕಾರಿ ಸಂಸ್ಥೆಗಳು ಮೂರು ರಾಜ್ಯಗಳಿಗೆ ಉಚಿತವಾಗಿ ಪರಿಹಾರ ಸಾಮಗ್ರಿಗಳನ್ನು ಕಾಯ್ದಿರಿಸಬಹುದು ಎಂದು ಅಧಿಸೂಚನೆ ತಿಳಿಸಿದೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಸೂಕ್ತವೆಂದು ಪರಿಗಣಿಸಲಾದ ಇತರ ಸಂಸ್ಥೆಗಳು ಸಹ ಈ ಪ್ರಯೋಜನವನ್ನು ಪಡೆಯಬಹುದು. ಪರಿಹಾರ ಸಾಮಗ್ರಿಗಳ ಸಾಗಣೆಯನ್ನು ಉಚಿತವಾಗಿ ಕೈಗೊಳ್ಳಲಾಗುತ್ತಿರುವುದರಿಂದ, ಡೆಮುರೇಜ್ ಅಥವಾ ಇತರ ಶುಲ್ಕಗಳಂತಹ ಯಾವುದೇ ಪೂರಕ ಶುಲ್ಕಗಳನ್ನು ವಿಧಿಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಆಗಸ್ಟ್.31 ರವರೆಗೆ ಅಥವಾ ಮುಂದಿನ ಆದೇಶಗಳವರೆಗೆ ಈ ಸೇವೆ ಲಭ್ಯ ಎಂದು ಇಲಾಖೆ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 