ಬಾಲನ್ಯಾಯ ತನಿಖಾ ಸದಸ್ಯರಾಗಿ ಕಟ್ನಳ್ಳಿ ನೇಮಕ
ಗದಗ 05 : ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ಪೋಷಣೆ) ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮಗಳ 2016ರ ಅನ್ವಯ ಜಿಲ್ಲಾ ಮಟ್ಟದ ತನಿಖಾ ಸಮಿತಿಯ ಸದಸ್ಯರನ್ನಾಗಿ ವೀಣಾ ಕಟ್ನಳ್ಳಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಸಿ,ಎನ್. ಶ್ರೀಧರ್ ಅವರು ಆದೇಶಿದ್ದಾರೆ.
ಅಪರ ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶ್ರೀ ಕವಲೂರು ಅವರನ್ನು ಸಮಿತಿ ಸದಸ್ಯರನ್ನಾಗಿ, ಜಿಲ್ಲಾ ಮಕ್ಕಳ ರಕ್ಞಣಾಧಿಕಾರಿಯನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ, ಚಂದ್ರಕಾಂತ ಚವ್ಹಾಣ, ಮಾನಸಿಕ ಆರೋಗ್ಯ ತಜ್ಞೆ ಡಾ. ವರ್ಷಾ ಅಂಘಡಿ ಅವರನ್ನು ಸದಸ್ಯರನ್ನಾಗಿ ಹಾಗೂ ವೀಣಾ ಕಟ್ನಳ್ಳಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಸಿ,ಎನ್. ಶ್ರೀಧರ್ ಅವರು ಆದೇಶಿದ್ದಾರೆ.