ಕತ್ತೆಬೆನ್ನೂರು : ಮೆಕ್ಕೆಜೋಳ ರಾಶಿ ಬೆಂಕಿಗಾಹುತಿ
Kattebennur: Maize piles catch fire
ಲೋಕದರ್ಶನ ವರದಿ
ಹೂವಿನಹಡಗಲಿ 13: ವಿದ್ಯುತ್ ಕಿಡಿಯ ತಗುಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಸುಮಾರು 9ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯ ರಾಶಿಗೆ ಬೆಂಕಿಗಾಹುತಿಯಾಗಿದೆ. ನೀಲಗುಂದ ಗುರುವಣ್ಣ ಅವರಿಗೆ ಸೇರಿದ ಮೆಕ್ಕೆಜೋಳ ರಾಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮೀಪದ ಖಾಲಿ ಸ್ಥಳದಲ್ಲಿ ರಾಶಿ ಹಾಕಿದ್ದರು. ಗುರುವಾರ ಮಧ್ಯಾಹ್ನ ಮೆಕ್ಕೆಜೋಳ ರಾಶಿಯಲ್ಲಿ ಹೊಗೆ ಬರುವುದನ್ನು ಕಂಡು ಸ್ಥಳೀಯರು ರಾಶಿಯ ಬಳಿ ತೆರಳಿ ನೋಡಿದಾಗ ಬೆಂಕಿ ಹತ್ತಿರುವುದು ತಿಳಿದಿದ್ದು ಕೂಡಲೇ ಹತ್ತಿರದಲ್ಲಿದ್ದ ನೀರನ್ನು ತಂದು ಹಾಕಿದರಾದರೂ ರಾಶಿಗೆ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ, ಆವರಿಸಿಕೊಂಡಿದ್ದರಿಂದ ಸುಮಾರು 200 ಕ್ವಿಂಟಲ್ನಷ್ಟು ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರುಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 