ಕತ್ತೆಬೆನ್ನೂರು : ಮೆಕ್ಕೆಜೋಳ ರಾಶಿ ಬೆಂಕಿಗಾಹುತಿ
Kattebennur: Maize piles catch fire
ಲೋಕದರ್ಶನ ವರದಿ
ಹೂವಿನಹಡಗಲಿ 13: ವಿದ್ಯುತ್ ಕಿಡಿಯ ತಗುಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಸುಮಾರು 9ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯ ರಾಶಿಗೆ ಬೆಂಕಿಗಾಹುತಿಯಾಗಿದೆ. ನೀಲಗುಂದ ಗುರುವಣ್ಣ ಅವರಿಗೆ ಸೇರಿದ ಮೆಕ್ಕೆಜೋಳ ರಾಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮೀಪದ ಖಾಲಿ ಸ್ಥಳದಲ್ಲಿ ರಾಶಿ ಹಾಕಿದ್ದರು. ಗುರುವಾರ ಮಧ್ಯಾಹ್ನ ಮೆಕ್ಕೆಜೋಳ ರಾಶಿಯಲ್ಲಿ ಹೊಗೆ ಬರುವುದನ್ನು ಕಂಡು ಸ್ಥಳೀಯರು ರಾಶಿಯ ಬಳಿ ತೆರಳಿ ನೋಡಿದಾಗ ಬೆಂಕಿ ಹತ್ತಿರುವುದು ತಿಳಿದಿದ್ದು ಕೂಡಲೇ ಹತ್ತಿರದಲ್ಲಿದ್ದ ನೀರನ್ನು ತಂದು ಹಾಕಿದರಾದರೂ ರಾಶಿಗೆ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ, ಆವರಿಸಿಕೊಂಡಿದ್ದರಿಂದ ಸುಮಾರು 200 ಕ್ವಿಂಟಲ್ನಷ್ಟು ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರುಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 