ಕೇಜ್ರೀವಾಲ್ ಓರ್ವ ನಕ್ಸಲ್, ಉಗ್ರಗಾಮಿ: ಬಿಜೆಪಿ ಸಂಸದ
ನವದೆಹಲಿ, ಜ 29 : ದೆಹಲಿ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದ ಪರ್ವೇಶ್ ವರ್ಮಾ, ಅವರನ್ನು ಉಗ್ರಗಾಮಿ ಹಾಗೂ ನಕ್ಸಲ್ ಎಂದು ಕರೆದಿದ್ದಾರೆ.
ನಕ್ಸಲರು ಹಾಗೂ ಉಗ್ರಗಾಮಿಗಳು ಸರ್ಕಾರಿ ಆಸ್ತಿಯನ್ನು ಹಾಳುಗೆಡವಿದ ಮಾದರಿಯಲ್ಲೇ ಸಿಎಂ ಕೇಜ್ರೀವಾಲ್ ಕೆಲಸ ಮಾಡುತ್ತಿದ್ದಾರೆ ಎಂದು ಪರ್ವೇಶ್ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇದರ ಜೊತೆಗೆ ಮಂಗಳವಾರ, ಶಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು 'ಅತ್ಯಾಚಾರಿಗಳು ಮತ್ತು ಕೊಲೆಗಡುಕರು' ಎಂಬ ಹೇಳಿಕೆ ನೀಡಿ ವರ್ಮಾ ವಿವಾದಕ್ಕೀಡಾಗಿದ್ದರು.
ಬುಧವಾರ ವರ್ಮಾ, 'ಕೇವಲ ಉಗ್ರಗಾಮಿಗಳು ಮತ್ತು ನಕ್ಸಲರು ಮಾತ್ರ ದೇಶಕ್ಕೆ ಹಾನಿ ಮಾಡಿ, ರಸ್ತೆಗಳು ಹಾಗೂ ಇತರ ಸರ್ಕಾರ ಆಸ್ತಿಗಳಿಗೆ ಹಾನಿಯುಂಟು ಮಾಡುತ್ತಾರೆ. ಅರವಿಂದ ಕೇಜ್ರೀವಾಲ್ ಕೂಡ ಅದನ್ನೇ ಮಾಡುತ್ತಿದ್ದಾರೆ' ಎಂದು ಹೇಳಿಕೆ ನೀಡಿದ್ದರು.
ಜೊತೆಗೆ, ತಮಗೆ ಅನಾಮಿಕ ಬೆದರಿಕೆ ಕರೆ ಬಂದಿರುವುದಾಗಿ ಹೇಳಿಕೆ ನೀಡಿರುವ ವರ್ಮಾ, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಕೂಡ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 