ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಡಾ. ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

ಲೋಕದರ್ಶನ ವರದಿ 

ಖಾನಾಪುರ 18: ಪಟ್ಟಣದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ಖಾನಾಪೂರ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ ಅಂಜಲಿ ನಿಂಬಾಳ್ಕರ್ ಅವರು ಇಂದು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.  

ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಾ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜತೆಗೂಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಪಟ್ಟಣದ ವಿವಿಧ ಪ್ರಮುಖ ಬೀದಿಗಳಿಲ್ಲಿ ಸಂಚರಿಸಿ ಡಾ. ಬಿ.ಆರ್‌.ಅಂಬೇಡ್ಕರ್, ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಬಸವೇಶ್ವರ ಪ್ರತಿಮೆಗಳಿಗೆ ಪೂಜೆ ಸಲ್ಲಿಸಿದರು. ನಂತರ ಬೃಹತ್ ಮೆರವಣಿಗೆ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದರು.  

ಈ ಸಂದರ್ಭದಲ್ಲಿ ಈ ವೇಳೆ ರಿಯಾಜ್ ಪಟೇಲ್, ಮಲ್ಲಿಕಾರ್ಜುನ ವಾಲಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಡಾ ಅಂಜಲಿ ಅಭಿಮಾನಿಗಳು ಹಾಜರಿದ್ದರು.