ಮುಂಗಾರು ಬೆಳೆ ನಷ್ಟ: ರೈತರಿಗೆ ಸೂಕ್ತ ಪರಿಹಾರ ನೀಡಲು ಆಗ್ರಹ
Kharif crop loss: Demand for adequate compensation to farmers
ರಾಣೆಬೆನ್ನೂರು 20: ತಾಲ್ಲೂಕಿನಲ್ಲಿ ಮುಂಗಾರು ಬೆಳೆ ಬಾರದೆ, ಸಮರ್ಕವಾಗಿ ಮಳೆಯೂ ಆಗದ ಪರಿಣಾಮ ರೈತರು ಆರ್ಥಿಕವಾಗಿ ಸಂಪೂರ್ಣ ನಷ್ಟ ಅನುಭವಿಸಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಸ್ಥಳ ಪರೀಶೀಲನೆ ನಡೆಸಿ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಬಿಜೆಪಿ ಯುವ ಮುಖಂಡ ಹಾಗೂ ಜಿ.ಪಂ. ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಆಗ್ರಹಿಸಿದರು.
ಗುರುವಾರ ಮಧ್ಯಾಹ್ನ ತಮ್ಮ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಣೆಬೆನ್ನೂರು ತಾಲ್ಲೂಕಿನ ರೈತರು ಬೆಳೆ ಕಾಣದೆ ಹಾಕಿದ ಬಂಡವಾಳವನ್ನೂ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಶಾಸಕರು ರೈತರಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕಿನ ಕೇರಿಮಲ್ಲಾಪುರ, ಚೌಡದಾನಪುರ, ಚಿಕ್ಕ ಕುರುವತ್ತಿ, ಚಂದಾಪುರ, ಹರನಗಿರಿ, ಯತ್ನಳ್ಳಿ, ಹೊನ್ನತ್ತಿ ಹಾಗೂ ಹಳೆ ಹೊನ್ನತ್ತಿ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಪರೀಶೀಲನೆ ನಡೆಸಲಾಗಿದ್ದು, ಬಹುತೇಕ ಕಡೆ ಬೆಳೆ ಸಂಪೂರ್ಣ ಹಾಳಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಬೆಳೆ ನಷ್ಟದ ಸಮಗ್ರ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 