ಎನ್ಆರ್ಸಿ ಮಾಹಿತಿಗೆ ಬಂದ ಶಂಕೆ: ಮೆಸ್ಕಾಂ ಸಿಬ್ಬಂದಿ ಮೇಲೆ ಖಾದರ್ ಆಪ್ತನಿಂದ ಹಲ್ಲೆ
ಮಂಗಳೂರು, ಜ 29, ಮಾಜಿ ಸಚಿವ ಯು.ಟಿ. ಖಾದರ್ ಆಪ್ತನೋರ್ವ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ, ವಿದ್ಯುತ್ ಬಿಲ್ ಕೊಡಲು ತೆರಳಿದ್ದಾಗ ಖಾದರ್ ಅವರ ಆಪ್ತ ಅಮೀರ್ ಹುಸೇನ್ ಮೂವರು ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾಹಿತಿ ಪಡೆಯಲು ಬಂದಿದ್ದಾರೆ ಎಂದು ಶಂಕಿಸಿ ಅಮೀರ್ ಹುಸೇನ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಮೆಸ್ಕಾಂ ಸಿಬ್ಬಂದಿ ರಂಗನಾಥ್, ಸಂದೇಶ್ ಕುಮಾರ್, ಮಧು ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 