ರನ್ನ ಬೆಳಗಲಿಯಲ್ಲಿ ಗಾಳಿಪಟ ಉತ್ಸವ
Kite festival in Ranna Belagali
ಮಹಾಲಿಂಗಪುರ 16: ಸಮೀಪದ ಬೆಳಗಳಿಯಲ್ಲಿ ಬೆಳಗಲಿ ವಿದ್ಯಾ ವರ್ಧಕ ಸಂಘದ ಆಶ್ರಯದಲ್ಲಿ. ಎಸ್.ಜಿ.ಎಮ್ ಪದವಿಪೂರ್ವ ಮಹಾವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಶ್ರೀ ಬಂದ ಲಕ್ಷ್ಮೀ ದೇವಿ ಕ್ರೀಡಾಂಗಣದಲ್ಲಿ ಬುಧವಾರ ದಂದು ಗಾಳಿಪಟ ಉತ್ಸವ ವಿಜೃಂಭಣೆಯಿಂದ ಜರುಗಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸ್ಥೆ ಛೇರ್ಮನ್ ಪಂಡಿತ ಪೂಜಾರಿ ಭಾರತೀಯ ಪ್ರತಿಯೊಂದು ಹಬ್ಬಗಳಿಗೆ ತನ್ನದೇ ಆದಂತ ಇತಿಹಾಸ ಮತ್ತು ವೈಜ್ಞಾನಿಕ ಕಾರಣಗಳಿವೆ. ಋತುಮಾನಗಳಿಗೆ ತಕ್ಕಂತೆ ನಮ್ಮ ಸಂಸ್ಕೃತಿಯಲ್ಲಿ ಆಹಾರದ ಬದಲಾವಣೆ, ಉಡುಗೆ ತೊಡಗೆಗಳಲ್ಲಿ ಬದಲಾವಣೆಗಳನ್ನು ಕಾಣುತ್ತೇವೆ.ಗಾಳಿಪಟದ ಉತ್ಸವವು ಆಶಾಡ ಮಾಸದ ಪ್ರಮುಖ ಗುಳ್ಳವನ ಹಬ್ಬವಾಗಿದ್ದು ಈ ಸಮಯದಲ್ಲಿ ಮಕ್ಕಳು ಪ್ರಕೃತಿಯ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ ಎಂದು ತಿಳಿಸಿದರು.
ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸುನಿಲ್ ಚರ್ಟಿ, ನಿರಂಜ್ ಛೋಪ್ರಾ, ಪಿ ವಿ ಸಿಂಧೂ ಮತ್ತು ಮೇರಿ ಕೋಮ್ ಎಂಬ ನಾಲ್ಕು ತಂಡಗಳಿಂದ ಗಾಳಿಪಟ ಸ್ಫರ್ಧೆ ಜರುಗಿತು,ವಿದ್ಯಾರ್ಥಿನಿಯರು ಸಾಂಸ್ಕೃತಿಕ ವೃತ್ತಿಗಳಿಗೆ ಹೆಜ್ಜೆ ಹಾಕಿದರು. ಸುಮಾರು 68 ಬಗೆಯ ಖಾದ್ಯಗಳ ಭರ್ಜರಿ ಭೋಜನ ಜರುಗಿತು.
ಹಿರಿಯರಾದ ಚಿಕ್ಕಪ್ಪ ನಾಯಕ, ಕಾಡಯ್ಯ ಗಣಾಚಾರಿ, ಮುತ್ತಪ್ಪ ಹೊಸಪೇಟಿ, ಶೇಖರ ಭದ್ರಶೆಟ್ಟಿ, ಸಂಗನಗೌಡ ಪಾಟೀಲ, ಪಿ ಜಿ ಸನ್ನಟ್ಟಿ, ಪ್ರಾಚಾರ್ಯರಾದ ಪರಶುರಾಮ ನಾಯಕ, ಯೋಗ ಶಿಕ್ಷಕರಾದ ರಾಘವೇಂದ್ರ ನೀಲನ್ನವರ ಸಂಸ್ಥೆಯ ಪದಾಧಿಕಾರಿಗಳು, ಉಪನ್ಯಾಸಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 