ಕೊಡಗು : 8 ವರ್ಷದ ಹುಲಿ ಸೆರೆ
ಮಡಿಕೇರಿ, ಮೇ 20,ವಿರಾಜಪೇಟೆ ತಾಲ್ಲೂಕಿನಲ್ಲಿ ಕಳೆದ 40 ದಿನಗಳ ಸತತ ಕಾರ್ಯಾಚರಣೆಯ ಬಳಿಕ 24 ಸಾಕು ಪ್ರಾಣಿಗಳನ್ನು ಕೊಂದಿದ್ದ 8 ವರ್ಷದ ಹುಲಿಯನ್ನು ಅರಣ್ಯ ಅಧಿಕಾರಿಗಳು ಮಂಗಳವಾರ ರಾತ್ರಿ ಸೆರೆ ಹಿಡಿದಿದ್ದಾರೆ.ಡಾ.ಸನಾಥ್ ಕೃಷ್ಣಬಾ ಮೌಲಿ ನೇತೃತ್ವದ ತಂಡ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ್ದು, ಸದ್ಯಕ್ಕೆ ಸ್ಥಳೀಯರು ನಿಟ್ಟುಸಿರಿಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಗೋಪಾಲಸ್ವಾಮಿ ಬೆಟ್ಟಗಳ ಮತ್ತಿಗೂಡು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು, ಹುಲಿಯನ್ನು ವಶಪಡಿಸಿಕೊಂಡ ತಂಡದಲ್ಲಿ ದಸರಾ ಆನೆಗಳಾದ ಭೀಮಾ, ಗಣೇಶ್ ಸೇರಿದ್ದವು, ಬಳಿಕ ಮೈಸೂರು ನಗರದಹೊರವಲಯದಲ್ಲಿರುವ ಕೇರಗಹಳ್ಳಿಯ ಚಾಮುಂಡಿ ಪ್ರಾಣಿ ರಕ್ಷಣಾ ಕೇಂದ್ರಕ್ಕೆ ಹುಲಿಯನ್ನು ಬಿಡಲಾಯಿತು. ಪಶುವೈದ್ಯ ವೈದ್ಯ ಮುಜುಬ್ ರೆಹಮಾನ್, ಅರಣ್ಯ ಅಧಿಕಾರಿ ತೀರ್ಥ, ರಾಜನ್ ದೇವಯ್ಯ ಮತ್ತು ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 