ಟೀಮ್ ಇಂಡಿಯಾ ಯಶಸ್ಸಿಗೆ ಥ್ರೋಡೌನ್ ತಜ್ಞ ರಘು ಕೊಡುಗೆ ಸ್ಮರಿಸಿದ ಕೊಹ್ಲಿ
ನವದೆಹಲಿ, ಮೇ 19,ಥ್ರೋಡೌನ್ ತಜ್ಞ ಕನ್ನಡಿಗ ಡಿ. ರಾಘವೇಂದ್ರ ಅವರು ಬೌಲಿಂಗ್ ಹ್ಯಾಂಡಲ್ ಬಳಸಿ ಗಂಟೆಗೆ 150-155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅವರ ಈ ಪ್ರತಿಭೆಯಿಂದ ಟೀಮ್ ಇಂಡಿಯಾ ಬ್ಯಾಟ್ಸ್ಮನ್ಗಳಿಗೆ ವೇಗದ ಬೌಲರ್ಗಳೆದು ಎದುರು ಸುಲಭವಾಗಿ ಬ್ಯಾಟಿಂಗ್ ಮಾಡುವುದು ಸಾಧ್ಯವಾಗಿದೆ ಎಂದು ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ.ಸ್ಪೂನ್ ಆಕಾರದ ಉದ್ದನೆಯ ಹ್ಯಾಂಡಲ್ನಲ್ಲಿ ಚೆಂಡನ್ನು ಇರಿಸಿ ಬೌಲರ್ಗಳು ಬೌಲಿಂಗ್ ಮಾಡಿದ ರೀತಿಯಲ್ಲೇ ಒಂದೆರಡು ಹೆಜ್ಜೆಯಿಟ್ಟು ಎಸೆಯಬಹುದು. ಆದರೆ, ಇದಕ್ಕೆ ಅಮೋಘ ಏಕಾಗ್ರತೆಯ ಅಗತ್ಯವಿರುತ್ತದೆ. ಅಷ್ಟೇ ಅಲ್ಲದೆ ಸತತವಾಗಿ 150 ಕಿ.ಮೀ.ಗೂ ಅಧಿಕ ವೇಗದಲ್ಲಿ ನಿಖರವಾಗಿ ಒಂದೇ ಜಾಗದಲ್ಲಿ ಚೆಂಡನ್ನು ಎಸೆಯುವುದು ಕೂಡ ಅಷ್ಟು ಸುಲಭವಲ್ಲ. ಹೀಗಾಗಿ ರಘು ಅವರ ಈ ಅಪರೂಪದ ಪ್ರತಿಭೆಯ ನೆರವಿನಿಂದ ಭಾರತೀಯ ಬ್ಯಾಟ್ಸ್ಮನ್ಗಳು ವೇಗಿಗಳ ಎದುರು ಇಂದು ಉತ್ತಮವಾಗಿ ಆಡುತ್ತಿದ್ದರೆ. ಟೀಮ್ ಇಂಡಿಯಾಗೆ ರಘು ಕೊಡುಗೆ ಅಪಾರ ಎಂದು ಇತ್ತೀಚೆಗೆ ಫೇಸ್ಬುಕ್ ಲೈವ್ ಚಾಟ್ನಲ್ಲಿ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.
"2013ರ ಬಳಿಕ ಭಾರತ ತಂಡ ವೇಗದ ಬೌಲರ್ಗಳ ಎದುರು ಅತ್ಯುತ್ತಮವಾಗಿ ಆಡಲು ಶುರು ಮಾಡಿರುವುದಕ್ಕೆ ರಘು ಅವರ ಥ್ರೋಡೌನ್ ಬೌಲಿಂಗ್ ಮುಖ್ಯ ಕಾರಣ," ಎಂದು ಬಾಂಗ್ಲಾದೇಶದ ಅನುಭವಿ ಆರಂಭಿಕ ಬ್ಯಾಟ್ಸ್ಮನ್ ತಮಿಮ್ ಇಕ್ಬಾಲ್ ಜೊತೆಗಿನ ಫೇಸ್ಬುಕ್ ಲೈವ್ ಚಾಟ್ನಲ್ಲಿ ಕೊಹ್ಲಿ ಹೇಳಿದ್ದಾರೆ."ಬ್ಯಾಟ್ಸ್ಮನ್ಗಳ ಫುಟ್ವರ್ಕ್ ಮತ್ತು ಬ್ಯಾಟ್ ಬೀಸುವಿಕೆಯನ್ನು ರಘು ಚೆನ್ನಾಗಿ ಗ್ರಹಿಸಿದ್ದಾರೆ. ಸೈಡ್ ಆರ್ಮ್ ಬೌಲಿಂಗ್ನಲ್ಲಿ ಎಷ್ಟು ಪ್ರಾವೀಣ್ಯ ಗಳಿಸಿದ್ದಾರೆ ಎಂದರೆ ಸುಲಭವಾಗಿ ಗಂಟೆಗೆ 155 ಕಿ.ಮೀ.ಗೂ ಅಧಿಕ ವೇಗದಲ್ಲಿ ಬೌಲಿಂಗ್ ಮಾಡಬಲ್ಲರು. ನೆಟ್ಸ್ನಲ್ಲಿ ರಘು ಎದುರು ಬ್ಯಾಟ್ ಮಾಡಿ ಮ್ಯಾಚ್ಗೆ ಬಂದಾಗ ವೇಗಿಗಳ ಎದುರು ಬ್ಯಾಟ್ ಬೀಸಲು ನಮ್ಮ ಬಳಿಕ ಹೆಚ್ಚು ಸಮಯವಿದೆ ಎಂಬ ಅನುಭವವಾಗುತ್ತದೆ," ಎಂದು ಕೊಹ್ಲಿ ವಿವರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 