ಕೂಡ್ಲಿಗಿ: ಉತ್ತಮ ಮಳೆ ನೀರು ಕಂಡ ಕೆರೆಗಳು ರೈತರಲ್ಲಿ ಹರ್ಷ
ಲೋಕದರ್ಶನ ವರದಿ
ಕೂಡ್ಲಿಗಿ 07: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗಳಿಗೆ ನೀರು ಬಂದು, ರೈತರಲ್ಲಿ ಹರ್ಷ ಮೂಡಿದೆ.
ಬಾರಿ ಗಾಳಿ, ಗುಡುಗು ಸಿಡಿಲಿನಿಂದ ಕೂಡಿದ್ದ ಮಳೆ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಇದರಿಂದ ಬಹುತೇಕ ಹಳ್ಳಗಳು ತುಂಬಿ ಹರಿದಿದ್ದು, ಕೆರೆ ಕಟ್ಟೆಗಳಿಗೆ ಸಾಕಷ್ಟು ನೀರು ಬಂದು ನಿಂತಿವೆ. ಇದರಿಂದ ರೈತರು ಬಿತ್ತನೆ ಮಾಡಲು ಅನುಕೂಲವಾಗಿದೆ.
ಪಟ್ಟಣದ ಸೊಲ್ಲಮ್ಮ ಮರದ ಹತ್ತಿರ ಹಳ್ಳಕ್ಕೆ ಅಡ್ಡವಾಗಿ ನಿರ್ಮಿಸಿರುವ ಸೇತುವೆಗೆ ಕಟ್ಟಿಗೆ, ಕಸ, ಕಡ್ಡಿ ಬಂದು ಅಡ್ಡ ನಿಂತಿದ್ದರಿಂದ ನೀರು ಮುಂದೆ ಹೋಗಲು ಸ್ಥಳವಿಲ್ಲದೆ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿವೆ. ಅಲ್ಲದೆ ಕೊಟ್ಟೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೂ ನೀರು ನಿಂತು ಸ್ಥಳೀಯರು ಪರದಾಡುವಂತಾಗಿದ್ದು, ಈ ರಸ್ತೆ ಮುಖಾಂತರ ಶಾಲೆಗ ಹೋಗುವ ವಿದ್ಯಾರ್ಥಿಗಳು ಜೀವ ಭಯದಲ್ಲಿಯೇ ನೀರನ್ನು ದಾಟಿಕೊಂಡೆ ಮುಂದೆ ಸಾಗಿದರು.
ಇತ್ತ ಕೊಟ್ಟೂರು ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿಮರ್ಿಸುವ ಕಾರ್ಯ ನಡೆದಿದ್ದು, ಬಡೇಲಡಕು ರಸ್ತೆಯ ಭಾಗದಿಂದ ಬರುವ ನೀರನ್ನು ಹಳ್ಳಕ್ಕೆ ಹೋಗಲು ಸೂಕ್ತ ಜಾಗವಿಲ್ಲದೆ ಸುಮಾರು ಮೂನರ್ಾಲ್ಕು ಮನೆಗಳಲ್ಲಿ ನೀರು ನಿಂತು ಮನೆಗಳಲ್ಲಿನ ಸಮಾನುಗಳು ನೀರಿನಲ್ಲಿ ತೇಲಿ ಹೋಗಿದ್ದು, ಅಕ್ಕಿ ಸೇರಿದಂತೆ ದಿನ ಬಳಕೆ ವಸ್ತುಗಳು ನೀರಿನಲ್ಲಿ ಮುಳುಗಿವೆ. ಇದರಿಂದ ಜನರು ರಾತ್ರಿಯಲ್ಲ ಜಾಗರಣೆ ಮಾಡುವಂತಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 