ಕೊಪ್ಪಳ : ದೋಟಿಹಾಳ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ
ಕೊಪ್ಪಳ 15: ಲೋಕಸಭಾ ಚುನಾವಣೆ ನಿಮಿತ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಸೋಮವಾರದಂದು ಮತದಾನ ಜಾಗೃತಿ ಜಾಥದ ಮೂಲಕ ಅರಿವು ಮೂಡಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯತ್ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕತರ್ೆಯರಿಂದ ಮತದಾನ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಕುಷ್ಟಗಿ ತಾ.ಪಂ. ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಾಥಾವು ಗ್ರಾಮದ ವಿವಿಧೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಮತ ಜಾಗೃತಿ ಮೂಡಿಸಲಾಯಿತು. ಅಲ್ಲದೆ ಗ್ರಾಮದ ಸಾರ್ವಜನಿಕರೊಳಗೊಂಡು ಮತದಾನ ಪ್ರತಿಜ್ಞಾವಿಧಿಯನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 