ಕೊಪ್ಪಳ: ಕೊನೆಯ ದಿನದ ಜಾತ್ರೋತ್ಸವ, ಹರಿದು ಬಂದ ಭಕ್ತಸಾಗರ
ಕೊಪ್ಪಳ 24: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾದ ಕೊಪ್ಪಳದ ಸುಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಕೊನೆಯ ದಿನವಾದ ಇಂದು ಹಾಗೂ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತ ಸಾಗರ ಹರಿದು ಬಂತು.
ಶುಕ್ರವಾರದಂದು ಬೆಳಗ್ಗೆಯಿಂದಲೇ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ಶ್ರೀಗವಿಸಿದ್ದೇಶ್ವರ ದೇವರ ದರ್ಶನ ಪಡೆದರು.
ಜನವರಿ 12ರಂದು ಶ್ರೀ ಗವಿಮಠದ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನಿಂದ ಪ್ರಾರಂಭವಾದ ಜಾತ್ರೆ ಇಂದು ಅಮವಾಸ್ಯೆಗೆ ಮುಕ್ತಾಯವಾಗಲಿದೆ. ಮಹಾದಾಸೋಹದಲ್ಲಿ ಭಕ್ತರಿಗೆ ಊಟಕ್ಕೆ ಗೋದಿ ಪಾಯಸ,ವಿವಿಧ ತರಕಾರಿ ಪಲ್ಯೆ, ಅನ್ನ ಸಾಂಬಾರ್, ಉಪ್ಪಿನಕಾಯಿ, ಕಡಲೆ ಚಟ್ನಿ ನೀಡಲಾಯಿತು.
ದಾಸೋಹದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ, ಶರಣಪ್ಪ ಗಿಣಿಗೇರಾ, ಶ್ರೀನಿವಾಸ ಪೂಜಾರ್, ವಿರೇಶ ಇಂದರಗಿ ಸೇರಿದಂತೆ ಇತರರು ಸೇವೆ ಸಲ್ಲಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 