ಕೊಟ್ಟೂರು: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಭರವಸೆ
ಲೋಕದರ್ಶನ ವರದಿ
ಕೊಟ್ಟೂರು 13: ಕೇಂದ್ರ ಸಕರ್ಾರದಿಂದ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೊಳಿಸಲಾಗುವುದು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಮಲ್ಲನಾಯ್ಕನಹಳ್ಳಿಯಲ್ಲಿ ಶುಕ್ರವಾರ ಶಿರಬಿ ಜಿಪಂ ಕ್ಷೇತ್ರದ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಪಕ್ಷದ ಬಲವರ್ಧನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚಚರ್ಿಸಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಶೀಘ್ರ ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ನೇಮಿರಾಜ್ ನಾಯ್ಕ ಮಾತನಾಡಿ, ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಕ್ರಮವಿಲ್ಲವಾಗಿದೆ. ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ, ಸುಳ್ಳು ದೂರುಗಳು ಠಾಣೆಗಳಲ್ಲಿ ದಾಖಲಿಸಿದರೆ ಸಹಿಸುವುದಿಲ್ಲ ಎಂದರು. ಶಿರಬಿ ಜಿಪಂ ಸದಸ್ಯೆ ಉಮಾದೇವಿ ಕೊಟ್ರೇಶ ಮಾತನಾಡಿ, ಜಿಪಂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡುವಂತೆ ಸಂಸದ ದೇವೇಂದ್ರಪ್ಪರಿಗೆ ಮನವಿ ಮಾಡಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಮಾತನಾಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 