ಕೊವಿದ್ -19: ಖಾಸಗಿ ಚಿಕಿತ್ಸಾಲಯಗಳನ್ನು ವೈದ್ಯರು ಮುಚ್ಚಿರುವುದು ಅಮಾನವೀಯ- ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 7, ರಾಜ್ಯದಲ್ಲಿ ಖಾಸಗಿ ಚಿಕಿತ್ಸಾಲಯಗಳನ್ನು ವೈದ್ಯರು ಮುಚ್ಚಿರುವುದು 'ಅಮಾನವೀಯ ಕೃತ್ಯ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಕೊರೊನಾವೈರಸ್ ಭೀತಿಯಿಂದಾಗಿ ವೈದ್ಯರು ತಮ್ಮ ಖಾಸಗಿ ಚಿಕಿತ್ಸಾಲಯಗಳನ್ನು ಮುಚ್ಚಿದ್ದಾರೆ. ಇದು ಅವರ ವೃತ್ತಿಗೆ ವಿರುದ್ಧವಾಗಿದೆ ಎಂದು ಅವರು ಟ್ವೀಟರ್ ನಲ್ಲಿ ಹೇಳಿದ್ದಾರೆ.ವೈದ್ಯರು ಚಿಕಿತ್ಸಾಲಯ ಮುಚ್ಚಿರುವುದರಿಂದ ಜನರ ಮೇಲೆ, ವಿಶೇಷವಾಗಿ ಇತರ ಕಾಯಿಲೆಗಳಿಂದ ಬಳಲುತ್ತಿರುವವರ ಮೇಲೆ ಪರಿಣಾಮ ಬೀರಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಖಾಸಗಿ ಚಿಕಿತ್ಸಾಲಯಗಳನ್ನು ಮುಚ್ಚದಂತೆ ಸರ್ಕಾರ ನಿರ್ದೇಶನಗಳನ್ನು ನೀಡಿದ್ದರೂ, ವೈದ್ಯರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಚಿಕಿತ್ಸಾಲಯಗಳನ್ನು ತೆರೆಯುವಂತೆ ವೈದ್ಯರಿಗೆ ಸೂಚಿಸಬೇಕು. ಚಿಕಿತ್ಸಾಲಯ ತೆರೆಯದಿದ್ದರೆ ಕಟ್ಟುನಿಟ್ಟಿನ ಕ್ರಮತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 