ಕೋವಿಡ್-19: ರಾಜ್ಯದ ಹೊರಗಿನ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ
ಬೆಂಗಳೂರು, ಏ 28, ಕರ್ನಾಟಕದ ಹೊರಗೆ ನೆಲಸಿರುವ ಕನ್ನಡಿಗರ ನೆರವಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.
ಮುಂಬೈ ಸೇರಿದಂತೆ ಇತರ ರಾಜ್ಯಗಳು ಮತ್ತು ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಏ. 24ರಂದು ಪತ್ರ ಬರೆದಿದ್ದರು. ಈ ಸಹಾಯವಾಣಿ ದೇಶಾದ್ಯಂತ ಸಿಲುಕಿರುವ ಕನ್ನಡಿಗರ ನೆರವಿಗೆ ಆಗಮಿಸಲಿದೆ. ಸಂಬಂಧಿಸಿದ ವ್ಯಕ್ತಿಗಳ ಕ್ಷೇತ್ರದ ಜನಪ್ರತಿನಿಧಿಗಳಿಗೆ ಅವರ ಸಮಸ್ಯೆಗಳನ್ನು ತಲುಪಿಸಲಾಗುವುದು. ಈ ಸಹಾಯವಾಣಿ ಬೆಂಗಳೂರಿಂದ ನಿರ್ವಹಿಸಲಾಗಲಾಗುವುದು ಮತ್ತು ಇದರಲ್ಲಿ ಮೂರು ಪಾಳಿಯಲ್ಲಿ 50 ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದಾರೆ.ಸಹಾಯವಾಣಿ ಸಂಖ್ಯೆ-080-22636800.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 