ಕೋವಿಡ್-19: ರಾಜ್ಯದ ಹೊರಗಿನ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ
ಬೆಂಗಳೂರು, ಏ 28, ಕರ್ನಾಟಕದ ಹೊರಗೆ ನೆಲಸಿರುವ ಕನ್ನಡಿಗರ ನೆರವಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.
ಮುಂಬೈ ಸೇರಿದಂತೆ ಇತರ ರಾಜ್ಯಗಳು ಮತ್ತು ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಏ. 24ರಂದು ಪತ್ರ ಬರೆದಿದ್ದರು. ಈ ಸಹಾಯವಾಣಿ ದೇಶಾದ್ಯಂತ ಸಿಲುಕಿರುವ ಕನ್ನಡಿಗರ ನೆರವಿಗೆ ಆಗಮಿಸಲಿದೆ. ಸಂಬಂಧಿಸಿದ ವ್ಯಕ್ತಿಗಳ ಕ್ಷೇತ್ರದ ಜನಪ್ರತಿನಿಧಿಗಳಿಗೆ ಅವರ ಸಮಸ್ಯೆಗಳನ್ನು ತಲುಪಿಸಲಾಗುವುದು. ಈ ಸಹಾಯವಾಣಿ ಬೆಂಗಳೂರಿಂದ ನಿರ್ವಹಿಸಲಾಗಲಾಗುವುದು ಮತ್ತು ಇದರಲ್ಲಿ ಮೂರು ಪಾಳಿಯಲ್ಲಿ 50 ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದಾರೆ.ಸಹಾಯವಾಣಿ ಸಂಖ್ಯೆ-080-22636800.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 