ಕೋವಿಡ್ -19: ಮಂಗಳೂರು ಗೋಲಿಬಾರ್ ವಿಚಾರಣೆ ಮುಂದಕ್ಕೆ
ಮಂಗಳೂರು, ಮಾರ್ಚ್ 23, ಕರೋನ ಹಿನ್ನಲೆಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ, ಮತ್ತು ಪೊಲೀಸ್ ಫೈರಿಂಗ್ ನಲ್ಲಿ ಇಬ್ಬರು ಮೃತಪಟ್ಟ ಘಟನೆಯ ಬಗ್ಗೆ ನಡೆಯುತ್ತಿರುವ ಮ್ಯಾಜಿಸ್ಟೀರಿಯಲ್ ವಿಚಾರಣೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಸೋಮವಾರ ಹೇಳಿದ್ದಾರೆ
ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಇಂದು ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಹಾಜರಾಗಿದ್ದರು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರು ಮ್ಯಾಜಿಸ್ಟ್ರೇಟ್ ಮುಂದೆ ಇಂದೇ ಹಾಜರಾಗಬೇಕಿದೆ. ಮಂಗಳೂರು ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಪೋಲೀಸರ ಗುಂಡಿಗೆ ನೌಶೀನ್ ಮತ್ತು ಜಲೀಲ್ ಮೃತಪಟ್ಟ ನಂತರ ರಾಜ್ಯ ಸರ್ಕಾರವು ಮ್ಯಾಜಿಸ್ಟೀರಿಯಲ್ ಮತ್ತು ಸಿಐಡಿ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಆದೇಶದ ಪ್ರಕಾರ, ಇದೆ 23 ರ ಮೊದಲು ವಿಚಾರಣಾ ವರದಿಯನ್ನು ಸಲ್ಲಿಸಬೇಕಾಗಿತ್ತು. ದಾಖಲೆಗಳು ಮತ್ತು ವಿಡಿಯೋ ಗಳನ್ ನುಪರಿಶೀಲಿಸಬೇಕಾಗಿರುವುದರಿಂದ ಹೆಚ್ಚಿನ ಸಮಯದವರೆಗೆ ಮ್ಯಾಜಿಸ್ಟ್ರೇಟ್ ಮಾಡಿದ ಕೋರಿಕೆಯ ಮೇರೆಗೆ, ಏಪ್ರಿಲ್ 23 ರೊಳಗೆ ವರದಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 