ಕೋವಿದ್ -19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದೇಶದಿಂದ ಆಗಮಿಸಿದ ಸುಮಾರು 600 ಜನರು ನಿಗಾದಲ್ಲಿ
ಮಂಗಳೂರು, ಮಾರ್ಚ್ 23, ಕೋವಿದ್ -19 ಹರಡುವಿಕೆ ತಡೆಗಟ್ಟುವ ಕ್ರಮವಾಗಿ ವಿದೇಶಗಳಿಂದ ಆಗಮಿಸಿದ 600 ಜನರು ಜಿಲ್ಲಾ ಪೊಲೀಸರ ಕಣ್ಗಾವಲಿನಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ವಿದೇಶದಿಂದ ಬಂದಿರುವವರ ಮನೆಗಳಿಗೆ ಪೊಲೀಸ್ ಸಿಬ್ಬಂದಿ ಭೇಟಿ ನೀಡುತ್ತಿದ್ದಾರೆ. 14 ದಿನಗಳ ಕಾಲ ಮನೆಯಲ್ಲಿ ಪ್ರತ್ಯೇಕವಾಗಿ, ಯಾರ ಸಂಪರ್ಕದಲ್ಲೂ ಇರದಂತೆ ಅವರಿಗೆ ಸೂಚಿಸಲಾಗಿದೆ. ಸಂಪರ್ಕತಡೆಯನ್ನು ಉಲ್ಲಂಘಿಸಿದವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸ್ಥಳೀಯ ನಿವಾಸಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳವನ್ನು ಸಂಪರ್ಕಿಸುವ ಗಡಿ ಪ್ರದೇಶಗಳ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ. ಗಡಿ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಬಿ.ಎಂ.ಲಕ್ಷ್ಮೀ ಪ್ರಸಾದ್ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 