ಕೊವಿಡ್-19: ರಂಜಾನ್ ಮುಗಿಯುವವರೆಗೆ ಲಾಕ್ಡೌನ್ ಮುಂದುವರಿಕೆಗೆ ಉಡುಪಿ ಕ್ವಾಜಿ ಮನವಿ
ಮಂಗಳೂರು, ಮೇ 3,ರಂಜಾನ್ ಮಾಸ ಮುಗಿಯುವವರೆಗೆ ಲಾಕ್ಡೌನ್ ಅವಧಿ ವಿಸ್ತರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಉಡುಪಿ ಕ್ವಾಜಿ ಅಲ್ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.ಈ ಭಾಗದಲ್ಲಿ ಮುಸ್ಲೀಮರು ಆಡಳಿತಗಳೊಂದಿಗೆ ಸಹಕರಿಸುತ್ತಿದ್ದು,ವಕ್ಫ್ ಮಂಡಳಿಯ ಸೂಚನೆಯಂತೆ ರಂಜಾನ್ ಮಾಸದಲ್ಲಿ ಇಫ್ತಾರ್ ಕೂಟಗಳು, ಪ್ರಾರ್ಥನೆಗಳು, ದರ್ಗಾ,ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳಿಂದ ದೂರವಿದ್ದಾರೆ ಎಂದು ಕ್ವಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈದ್ ಸಂದರ್ಭದಲ್ಲಿ ಲಾಕ್ಡೌನ್ ಸಡಿಲಿಕೆಯಿಂದ ವಾಹನ ಸಂಚಾರ ಮತ್ತು ಜನರ ಓಡಾಟ ಹೆಚ್ಚಾಗಿ ಕೊವಿಡ್-19 ಮತ್ತೊಮ್ಮೆ ಉಲ್ಬಣಗೊಳ್ಳುವ ಅಪಾಯವಿದೆ. ಮಾರಣಾಂತಿಕ ಸೋಂಕು ಹರಡುವಿಕೆ ತಡೆಯಲು ಕನಿಷ್ಠ ರಂಜಾನ್ ಮಾಸ ಮುಗಿಯುವವರೆಗೆ ಲಾಕ್ಡೌನ್ ಮುಂದುವರಿಸಲು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ನಿಯಮಗಳನ್ನು ಸಡಿಲಿಸುವುದರಿಂದ ಹಬ್ಬದ ಸಂದರ್ಭದಲ್ಲಿ ಜನರು ಬಟ್ಟೆ, ಮತ್ತಿತರ ವಸ್ತುಗಳನ್ನು ಖರೀದಿಸಲು ಮುಗಿಬೀಳಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ದೊಡ್ಡ ಸಮಸ್ಯೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 