ಕೋವಿಡ್ -19: ಉಡುಪಿ ಜಿಲ್ಲೆ ಶೀಘ್ರದಲ್ಲೇ ’ಹಸಿರು ವಲಯ’ವಾಗಿ ಘೋಷಣೆ
ಉಡುಪಿ, ಎಪ್ರಿಲ್ 25, ಈ ತಿಂಗಳ 27 ರೊಳಗೆ ಕೊವಿಡ್-19ನ ಹೊಸ ಪ್ರಕರಣಗಳು ವರದಿಯಾಗದಿದ್ದರೆ ಉಡುಪಿ ಜಿಲ್ಲೆಯನ್ನು ‘ಹಸಿರು ವಲಯ’ವಾಗಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಉಲ್ಲೇಖಿಸಿ ಪ್ರಕಟಣೆ ತಿಳಿಸಿದೆ.ಸಂಪೂರ್ಣವಾಗಿ ಗುಣಮುಖರಾದ ಮೂವರು ಕೋವಿಡ್ -19 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಶುಕ್ರವಾರ ಕೋವಿಡ್ -19 ನಿಂದ ಗುಣಮುಖರಾದ ಭಟ್ಕಳ ಮೂಲದ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮೊದಲ ಕೋವಿಡ್ -19 ಪ್ರಕರಣ ಮಾರ್ಚ್ 25 ರಂದು ದೃಢಪಟ್ಟಿತ್ತು. ಸರಿಯಾಗಿ ಒಂದು ತಿಂಗಳ ನಂತರ ಏಪ್ರಿಲ್ 25 ರಂದು ಜಿಲ್ಲೆಯು ಕೋವಿಡ್ -19 ಮುಕ್ತ ಜಿಲ್ಲೆಯಾಗುವತ್ತ ಸಾಗುತ್ತಿದೆ.ಜಿಲ್ಲೆಯಲ್ಲಿ ಒಟ್ಟು 3,238 ಜನರು ಕರೋನವೈರಸ್ ಸೋಂಕು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. 1,929 ಜನರು 28 ದಿನಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿದ್ದರೆ, 2,512 ಜನರು 14 ದಿನಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿದ್ದಾರೆ.ಸದ್ಯ, 50 ಮಂದಿ ಪ್ರತ್ಯೇಕ ವಾರ್ಡ್ನಲ್ಲಿದ್ದರೆ 273 ಜನರನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 1,024 ಗಂಟಲಿನ ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿದೆ. 947 ಮಾದರಿಗಳಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಉಳಿದಂತೆ 74 ಪರೀಕ್ಷಾ ವರದಿಗಳನ್ನು ಕಾಯಲಾಗುತ್ತಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 