ಕೋವಿಡ್-19: ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಕಾರ್ಯಪಡೆ
ಬೆಂಗಳೂರು,
ಮಾ.31, ಕೋವಿಡ್-19 ವೈರಾಣು ಹರಡುವುದನ್ನು ತಡೆಯಲು ಉನ್ನತ ಶಿಕ್ಷಣ ಇಲಾಖೆಯು ರಾಜ್ಯ
ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್. ವಿ. ರಂಗನಾಥ್ ನೇತೃತ್ವದಲ್ಲಿ
ಕಾರ್ಯಪಡೆಯನ್ನು ರಚಿಸಿದೆ.ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ ಇಲಾಖೆ,
ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ, ಕಾಲೇಜು- ಸಂಸ್ಥೆಗಳಲ್ಲಿ ಕೋವಿಡ್-19 ವೈರಾಣು
ಹರಡುವಿಕೆಯನ್ನು ಸಮರ್ಥವಾಗಿ ತಡೆಯಲು ಉನ್ನತ ಶಿಕ್ಷಣ ಇಲಾಖೆಗೆ ಸಲಹೆ ಸೂಚನೆ ನೀಡಲು ಈ
ಕಾರ್ಯಪಡೆ ರಚಿಸಲಾಗಿದೆ.ಈ ಕಾರ್ಯಪಡೆಯು ಉನ್ನತ ಶಿಕ್ಷಣ ಇಲಾಖೆಗೆ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.ಕಾರ್ಯಪಡೆಯ
ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿಗಳಾದ ಗೋಪಾಲ ಬಿ.ಹೊಸೂರ್, ಕೆ ಅಣ್ಣಾಮಲೈ,
ಐಎಎಸ್ ಅಧಿಕಾರಿಗಳಾದ ಅನಿರುದ್ಧ ಶ್ರವಣ್, ಪಿ. ಪ್ರದೀಪ್, ತಾಂತ್ರಿಕ ಶಿಕ್ಷಣ ಇಲಾಖೆ
ನಿರ್ದೇಶಕ ಎಚ್.ಯು. ತಳವಾರ್, ಮಾಹಿತಿ ತಂತ್ರಜ್ಞಾನ ಇಲಾಖೆ ನಿರ್ದೇಶಕ ಪ್ರಶಾಂತ್
ಮಿಶ್ರಾ, ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಕೆ.ಎಲ್.ಸುಬ್ರಹ್ಮಣ್ಯ, ರಾಜ್ಯ ಉನ್ನತ
ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್.ಎ.ಕೋರಿ ನೇಮಕವಾಗಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 