ಕೋವಿಡ್ ಸೋಂಕಿತ ಕೆಸಿ ಜನರಲ್ ಆಸ್ಪತ್ರೆಯಿಂದ ಬಿಡುಗಡೆ: ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು
ಬೆಂಗಳೂರು,
ಏ.13, ಇಲ್ಲಿನ ಮಲ್ಲೇಶ್ವರಂನ ಕೆ. ಸಿ. ಜನರಲ್ ಆಸ್ಪತ್ರೆ ಗೆ ಕೊರೊನಾ
ವೈರಸ್ ಸೋಂಕಿನಿಂದ ದಾಖಲಾಗಿದ್ದ ವ್ಯಕ್ತಿಯೊಬ್ಬರು ಗುಣಮುಖರಾಗಿ ಮನೆಗೆ ತೆರಳುವ
ಮುನ್ನ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಅವರನ್ನು ಬೀಳ್ಕೊಟ್ಟಿದ್ದಾರೆ.ಈ ವೀಡಿಯೋವನ್ನು ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿ, ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಕೋವಿಡ್–19ನಿಂದ ಚೇತರಿಸಿಕೊಂಡ ವ್ಯಕ್ತಿಯು, ಚಿಕಿತ್ಸೆ ನೀಡಿದ ವೈದ್ಯರ ಕಾಲಿಗೆ ಬಿದ್ದು ಧನ್ಯವಾದ ಅರ್ಪಿಸಿಸುತ್ತಿರುವುದು ವೀಡಿಯೋದಲ್ಲಿದೆ. ಕೆ.ಸಿ
ಜನರಲ್ ಆಸ್ಪತ್ರೆಯಲ್ಲಿ ಕೋವಿಡ್–19ನಿಂದ ಗುಣಮುಖರಾಗಿ ಹೊರಟಾಗ, ವೈದ್ಯರು ಮತ್ತು
ಸಿಬ್ಬಂದಿ ಈ ವ್ಯಕ್ತಿಯನ್ನು ಪ್ರೀತಿಪೂರ್ವಕವಾಗಿ ಬೀಳ್ಕೊಡುತ್ತಾರೆ. ಈ
ಸಂದರ್ಭದಲ್ಲಿ, ವ್ಯಕ್ತಿಯು ಹಗಲಿರುಳು ತನ್ನ ಸೇವೆಗೈದು ಗುಣಪಡಿಸಿದ ವೈದ್ಯರ
ಕಾಲಿಗೆರಗುತ್ತಾರೆ. ನಮ್ಮ ಭಾರತೀಯ ಸಂಸ್ಕೃತಿಯೆಂದರೆ ಇದಲ್ಲವೇ ನಿಜಕ್ಕೂ
ಹೆಮ್ಮೆಯೆನಿಸುತ್ತದೆ.' ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 