ಇನ್ನೂ ಕಡಿಮೆಯಾಗದ ಕೃಷ್ಣಾ ನದಿ ನೀರು: ರಸ್ತೆಗಳು ಜಲಾವೃತ
Krishna River water not receding: Roads flooded
ಜಮಖಂಡಿ 25: ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ. ಕೃಷ್ಣ ಅಚ್ಚು ಕಟ್ಟು ಪ್ರದೇಶದಲ್ಲಿ ಸಾಕಷ್ಟು ಮಳೆಯಾಗಿದ್ದರಿಂದ ಸುಮಾರು 2 ಲಕ್ಷ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದೆ. ಇದರಿಂದಾಗಿ ತಾಲೂಕಿನ ಹಲವು ಗ್ರಾಮಗಳ ರಸ್ತೆಗಳು ಜಲಾವೃತವಾಗಿವೆ.
ಜಂಬಗಿಯಿಂದ ಸಾವಳಗಿಗೆ ಹೋಗುವ ಮಾರ್ಗದ ಮಧ್ಯ ನದಿಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಟಕ್ಕಳಕಿ, ಟಕ್ಕೋಡ ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಬೇರೆ ಊರುಗಳಿಗೆ ಹೋಗಬೇಕಾದವರು ಸಾವಳಗಿ ರಸ್ತೆಯ ಮುಖಾಂತರ ಅಥವಾ ಹಿರೇಪಡಸಲಗಿ ಮುಖಾಂತರ ಸಂಚರಿಸುವ ಅನಿವಾರ್ಯತೆ ಉಂಟಾಗಿದೆ. ಅದರಂತೆ ಗೌಡ್ರು ಗಡ್ಡೆ ಪ್ರದೇಶದ ರಸ್ತೆ ಜಲಾವೃತವಾಗಿದೆ. ತಾಲೂಕಿನ ಮುತ್ತೂರು ನಡುಗಡ್ಡೆ ಪ್ರದೇಶ ಹಾಗೂ ತುಬಚಿ ಗ್ರಾಮದ ಹಲವು ರಸ್ತೆಗಳು ಜಲಾವೃತಗೊಂಡಿವೆ.
ಕೃಷ್ಣ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದರಿಂದ ರಾಜಾಪುರ ಬ್ಯಾರೇಜ್ ನಿಂದ 179000 ಕ್ಯುಸೆಕ್ ಧೂದಗಂಗಾದಿಂದ 43000 ಕಲ್ಲೂರು ಮ್ಯಾರೇಜ್ದಿಂದ 2.21 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ತಾಲೂಕಿನಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಇನ್ನೆರಡು ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ದಿನಗಳಲ್ಲಿ ಪ್ರವಾಹ ಇಳಿಮುಖವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 