ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕೃಷ್ಣಪ್ರಿಯಾ ಬದಿ
Krishnapriya Badi won the first place in the state level Kalashri competition
ಗದಗ 30: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಬಾಲಭವನ ಸೊಸೈಟಿಯ ಸಹಯೋಗದಲ್ಲಿ ಶುಕ್ರವಾರ ಬೆಂಗಳೂರಿನ ರಾಜ್ಯ ಬಾಲ ಭವನ ಸೊಸೈಟಿಯಲ್ಲಿ ನಡೆದ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶಾಸ್ತ್ರೀಯ ಸಂಗೀತದಲ್ಲಿ ಗದಗನ ಕೃಷ್ಣಪ್ರಿಯಾ ಬದಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾದ್ಯ ಸಂಗೀತದಲ್ಲಿ ಕೊಳಲು ಕುಮಾರಿ ಭಾಗ್ಯ ವಿಭೂತಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪರ್ಧೆಯಲ್ಲಿ ವಿಜೇತರಿಗೆ ಕಲಾಶ್ರೀ ಪ್ರಶಸ್ತಿಯನ್ನು ವಿತರಿಸಿದರು.
ಪ್ರಶಸ್ತಿ ಪಡೆದಂತಹ ವಿಜೇತರಿಗೆ ಶನಿವಾರ ಜಿಲ್ಲಾ ಬಾಲಭವನ ಅಧ್ಯಕ್ಷರು ಹಾಗೂ ಗದಗ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭರತ್ ಎಸ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಪದ್ಮಾವತಿ ಜಿ ಅವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 