ಲಾಕ್ಡೌನ್ ಸಮಸ್ಯೆ ಸಿಲುಕಿದವರಿಗಾಗಿ ‘ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ ಕುಮಾರಸ್ವಾಮಿ
ಬೆಂಗಳೂರು, ಏ.1,ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು 'ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ. ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 