ಸಮೃದ್ಧ ಮಳೆ - ಬೆಳೆಗಾಗಿ ಸಿದ್ದೇಶ್ವರ ಸ್ವಾಮಿಗೆ ಕುಂಭ ಅಭಿಷೇಕ
Kumbh Abhishekam to Siddheshwara Swamy for abundant rain - crops
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಸಂಕಲ್ಪಿಸಿ ಸ್ಥಳೀಯರು ಶ್ರೀ ಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಸೋಮವಾರ ನೆರವೇರಿಸಿದರು.ಅಳವಂಡಿ ಕಟ್ಟಿಮನಿ ಹಿರೇಮಠದ ಮರುಳಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ದಲ್ಲಿ ಬಾವಿಹಳ್ಳಿ ಗ್ರಾಮದ ಕರಿಬಸವೇಶ್ವರ ಸ್ವಾಮಿಯ ದೇವಸ್ಥಾನ ದಿಂದ ವಿಶೇಷ ಗಂಗಾ ಪೂಜೆಯನ್ನು ನೆರವೇರಿತು ನಂತರ ಮಹಿಳೆಯರಿಂದ 111 ಕಳಸ ಮತ್ತು 151 ಪೂರ್ಣ ಕುಂಭಗಳು ಮೆರವಣಿಗೆ ಮೂಲಕ ತಂದು ಸಿದ್ದೇಶ್ವರ ಸ್ವಾಮಿಗೆ ಜಲ ಅಭಿಷೇಕ ಮಾಡಿದರು. ಮೆರವಣಿಗೆಯಲ್ಲಿ ಕಳಸದಾರತಿ, ಮಂಗಳವಾದ್ಯ , ಸಮಾಳ, ನಂದಿಕೋಲು ಮೆರಗು ತಂದವು. ಹೆಚ್.ಎಂ.ಮಲ್ಲಿಕಾರ್ಜುನಯ್ಯ, ಯು.ಎಂ.ಮಹಾಸ್ವಾಮಿ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಿದ್ದೇಶ್ವರ ಕಮಿಟಿ ಪದಾಧಿಕಾರಿಗಳು,ಬಾವಿಹಳ್ಳಿ, ಹೊಳಗುಂದಿ ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ಅನ್ನ ಸಂತರೆ್ಣ ನಡೆಯಿತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 