ಗುರುದ್ವಾರದ ಮೇಲಿನ ದಾಳಿಗೆ ಕುಮ್ಮಕ್ಕು, ಇಮ್ರಾನ್ ಚಿಸ್ತಿ ಬಂಧನ
ಇಸ್ಲಾಮಾಬಾದ್, ಜ 6 ಸಿಖ್ಖರ ಪವಿತ್ರ ಯಾತ್ರಾಸ್ಥಳ, ಪಾಕಿಸ್ತಾನದಲ್ಲಿರುವ ನನ್ ಕಾನಾ ಸಾಹಿಬ್ ಗುರುದ್ವಾರದ ಮೇಲಿನ ದಾಳಿಗೆ ಕುಮ್ಮಕ್ಕು, ಪ್ರಚೋದನೆ ನೀಡಿದ ಆರೋಪದಡಿ ಇಮ್ರಾನ್ ಚಿಸ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ .
ನನ್ ಕಾನಾ ಸಾಹಿಬ್ ಗುರುದ್ವಾರದ ಮೇಲೆ ದಾಳಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದ ಪಾಕಿಸ್ತಾನದ ವಿರುದ್ಧ ಭಾರೀ ಪ್ರತಿಭಟನೆ, ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಚಿಸ್ತಿಯನ್ನು ಬಂಧಿಸಲಾಗಿದೆ ಎಂದೂ ವರದಿ ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ಚಿಸ್ತಿ ಮನೆಯಿಂದಲೇ ಕ್ಷಮಾಪಣೆಯ ವೀಡಿಯೋವನ್ನು ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ.
ಸ್ಥಳೀಯ ನಿವಾಸಿಗಳ ಜತೆಗೂಡಿ ಚಿಸ್ತಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿ ನನ್ ಕಾನಾ ಗುರುದ್ವಾರ ಸಾಹಿಬ್ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿರುವ ಘಟನೆ ನಡೆದಿತ್ತು.
ಚಿಸ್ತಿ ಈಶಾನಾ ಸಹೋದರನಾಗಿದ್ದು, ಈತ ಸಿಖ್ಖ ಯುವತಿ ಜಗ್ಜೀತ್ ಕೌರ್ ಅಪಹರಣದ ಆರೋಪಿಯಾಗಿದ್ದಾನೆ. ನನ್ ಕಾನಾ ಗುರುದ್ವಾರದ ಮೇಲೆ ದಾಳಿ ನಡೆಸಿದ ಗುಂಪು ಸಿಖ್ ವಿರೋಧಿ ಘೋಷಣೆ ಕೂಗಿರುವುದಾಗಿಯೂ ವರದಿಯಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 