ಕುವೆಂಪು ಸಂಸ್ಥೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
Kuvempu Institute's meritorious students honored
ತಾಳಿಕೋಟಿ 11: ತಾಲೂಕಿನ ಬಳಗಾನೂರ ಕ್ರಾಸ್ ನಲ್ಲಿರುವ ಕುವೆಂಪು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ಕುವೆಂಪು ಶಿಕ್ಷಣ ಸಂಸ್ಥೆಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಕಳೆದ ಬಾರಿ ತೋರಿದ ಉತ್ತಮ ಸಾಧನೆಗಾಗಿ ಸನ್ಮಾನಿಸಲಾಯಿತು. ಅಧ್ಯಕ್ಷರಾದ ಬಸವರಾಜ್ ಎನ್.ನಾಯ್ಕೋಡಿ ಹಾಗೂ ಅವರ ಧರ್ಮಪತ್ನಿ ಶಾರದಾ ಬಿ ನಾಯ್ಕೋಡಿ ಇವರನ್ನು ಶೈಕ್ಷಣಿಕ ಸೇವೆಗಾಗಿ ವೇದಿಕೆಯ ಗಣ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು. ಕಕ್ಕೇರಾ ಭಾವೈಕ್ಯತಾ ಶಿಶುನಾಳ ಶರೀಫ ಮಠದ ಸಂತ ಶ್ರೀ ಶರೀಫ ಶಿವಯೋಗಿಗಳು ಹಾಗೂ ಬಳಗಾನೂರದ ಮಾತೃಶ್ರೀ ಮಂಜುಳಾ ಅಮ್ಮನವರು ಸಾನಿಧ್ಯ ವಹಿಸಿದ್ದರು. ಗಣ್ಯರಾದ ನಿಂಗನಗೌಡ ಪಾಟೀಲ(ಬಳಗಾನೂರ),ಕಾಶಿನಾಥ ತಿ. ಸಜ್ಜನ, ಮಂದಾಕಿನಿ ಷಣ್ಮುಖಪ್ಪ ಅಮ್ಮನವರು, ಉಪಾಧ್ಯಕ್ಷ ಮಧು ಬಿ.ನಾಯ್ಕೋಡಿ, ಪ್ರಧಾನ ಕಾರ್ಯದರ್ಶಿ ಮನು ಬಿ. ನಾಯ್ಕೋಡಿ, ಉಪನ್ಯಾಸಕ ಎಚ್.ವಿ.ಬಾಗೇವಾಡಿ ನಿವೃತ್ತ ಶಿಕ್ಷಕ ಎಂ.ಎಸ್.ಹುಲ್ಲೂರ, ಪ್ರಾಚಾರ್ಯ ಸವಿತಾ ಎಂ.ಕಾಗಿ, ಜಯಶ್ರೀ ಎಂ.ಕಾಗಿ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 